23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಸುಳ್ಯದ ಕೆ. ವಿ. ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಕೆ. ವಿ. ಜಿ. ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಸೌತಡ್ಕ ಗಣೇಶ್ ಕಲಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರವು ಜು.30 ರಂದು ಜರುಗಿತು.

ಕಾರ್ಯಕ್ರಮವನ್ನು ಡಾ. ಮೋಹನ್ ದಾಸ್ ಗೌಡ ಕೊಕ್ಕಡ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸೌತಡ್ಕ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪಾಡಿ ವಹಿಸಿದ್ದರು.

ವೇದಿಕೆಯಲ್ಲಿ ಡಾ. ಎಂ. ಎಂ. ದಯಾಕರ್ ಉಜಿರೆ, ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಆರ್. ಎಸ್. ಎಸ್. ಮುಖಂಡ ಕೃಷ್ಣ ಭಟ್, ಕೊಕ್ಕಡ ಗ್ರಾ. ಪಂ.ಅಧ್ಯಕ್ಷ ಯೋಗೀಶ್ ಅಲಂಬಿಲ, ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಯಾನಂದ ಹೆಗ್ಡೆ ಸ್ವಾಗತಿಸಿದರು. ಕೇಶವ ಗೌಡ ಕೊಲ್ಲಾಜೆಪಲ್ಕೆ ಕಾರ್ಯಕ್ರಮ ನಿರೂಪಿಸಿ, ಸಮಿತಿ ಸದಸ್ಯ ಪುರಂದರ ಗೌಡ ಕಡಿರ ಧನ್ಯವಾದವಿತ್ತರು.

Related posts

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಫ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya

ಪಹಲ್ಗಾಮ್ ಪೈಶಾಚಿಕ ಕೃತ್ಯ ಹೇಯ ಮತ್ತು ಖಂಡನೀಯ : ನಿವೃತ್ತ ಎಸ್ಪಿ ಪೀತಾಂಬರ ಹೆರಾಜೆ

Suddi Udaya

ಗುರುವಾಯನಕೆರೆ: ಜನ ಮಂಗಲ ಕಾರ್ಯಕ್ರಮದಡಿ ಯು ಶೇಪ್ ವಾಕರ್ ವಿತರಣೆ

Suddi Udaya
error: Content is protected !!