September 6, 2026
ಅಪರಾಧ ಸುದ್ದಿ

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕುಂಟಾಲಪಳಿಕೆ ನಿವಾಸಿ ಹರೀಶ್ ಆಚಾರ್ಯರ ಶವ ಬಾವಿಯಲ್ಲಿ ಪತ್ತೆ:

ಅರಸಿನಮಕ್ಕಿ : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಶವ ಬಾವಿಯಲ್ಲಿ ಪತ್ತೆಯಾದ ಪ್ರಕರಣ ಅರಸಿನಮಕ್ಕಿ ಯಲ್ಲಿ ನಡೆದಿದೆ.
ಇಲ್ಲಿಯ ಕುಂಟಾಲಪಳಿಕೆ ನಿವಾಸಿ ಹರೀಶ್ ಆಚಾರ್ಯ (40ವ.)ರವರು ಎರಡು ದಿನದಿಂದ ನಾಪತ್ತೆಯಾಗಿದ್ದು, ಇಂದು (ಜು.30)ಬೆಳಗ್ಗೆ ಅವರ ತಂದೆ ಮನೆಯ ಬಾವಿಯಲ್ಲಿ ಶವ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ತಂದೆ ತಾಯಿ ಅಕ್ಕಾಪಕ್ಕದಲ್ಲಿ ಬೇರೆ ಬೇರೆ ಮನೆಗಳಲ್ಲಿ ವಾಸಿಸುತ್ತಿದ್ದು ಹರೀಶ್ ತಾಯಿ ಮನೆಯಲ್ಲಿ ವಾಸಿಸುತ್ತಿದ್ದರು. ಹರೀಶ್ ಅವಿವಾಹಿತರು. ಹರೀಶ್ ಆಚಾರ್ಯ ಅವರು ಆಕಸ್ಮಿಕವಾಗಿ ‌ಬಾವಿಗೆ ಬಿದ್ದರೊ, ಅಥವಾ ಇನ್ನೇನಾದರೂ ಘಟನೆ ನಡೆದಿರಬಹುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಧರ್ಮಸ್ಥಳ ಪ್ರಕರಣ -ದೂರುದಾರ ಚಿನ್ನಯ್ಯ ನೀಡಿದ ದೂರು ಸುಳ್ಳು : ಮಾನ್ಯ ಹೈಕೋರ್ಟ್ ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ ವಾದ

Suddi Udaya

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya

ಮಂಗಳೂರಿನಲ್ಲಿ ಆನೆದಂತ ಮಾರಟಕ್ಕೆ ಯತ್ನ; ಪುದುವೆಟ್ಟು ಗ್ರಾಮದ ಶಶಾಂಕ ವಶಕ್ಕೆ

Suddi Udaya

ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಕಾಜೂರಿನ ಸಯ್ಯದ್ ಅನ್ವರ್

Suddi Udaya

ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ನಿಡ್ಲೆ
ಪಿಲಿಕಜೆ ನಿವಾಸಿ ದಿನೇಶ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!