23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕುಂಟಾಲಪಳಿಕೆ ನಿವಾಸಿ ಹರೀಶ್ ಆಚಾರ್ಯರ ಶವ ಬಾವಿಯಲ್ಲಿ ಪತ್ತೆ:

ಅರಸಿನಮಕ್ಕಿ : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಶವ ಬಾವಿಯಲ್ಲಿ ಪತ್ತೆಯಾದ ಪ್ರಕರಣ ಅರಸಿನಮಕ್ಕಿ ಯಲ್ಲಿ ನಡೆದಿದೆ.
ಇಲ್ಲಿಯ ಕುಂಟಾಲಪಳಿಕೆ ನಿವಾಸಿ ಹರೀಶ್ ಆಚಾರ್ಯ (40ವ.)ರವರು ಎರಡು ದಿನದಿಂದ ನಾಪತ್ತೆಯಾಗಿದ್ದು, ಇಂದು (ಜು.30)ಬೆಳಗ್ಗೆ ಅವರ ತಂದೆ ಮನೆಯ ಬಾವಿಯಲ್ಲಿ ಶವ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ತಂದೆ ತಾಯಿ ಅಕ್ಕಾಪಕ್ಕದಲ್ಲಿ ಬೇರೆ ಬೇರೆ ಮನೆಗಳಲ್ಲಿ ವಾಸಿಸುತ್ತಿದ್ದು ಹರೀಶ್ ತಾಯಿ ಮನೆಯಲ್ಲಿ ವಾಸಿಸುತ್ತಿದ್ದರು. ಹರೀಶ್ ಅವಿವಾಹಿತರು. ಹರೀಶ್ ಆಚಾರ್ಯ ಅವರು ಆಕಸ್ಮಿಕವಾಗಿ ‌ಬಾವಿಗೆ ಬಿದ್ದರೊ, ಅಥವಾ ಇನ್ನೇನಾದರೂ ಘಟನೆ ನಡೆದಿರಬಹುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಪೋಲಿಸರ ಸೂಚನೆ ನಿರ್ಲಕ್ಷಿಸಿ ಅಕ್ರಮಕೂಟ ಸೇರಿದ ಹಿನ್ನೆಲೆ ಅನಿಲ್ ಕುಮಾರ್ ಅಂತರ, ಪ್ರಸನ್ನರವಿ, ಕುಸುಮಾವತಿ ಸೇರಿದಂತೆ 20ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya
error: Content is protected !!