July 23, 2026
ಅಪರಾಧ ಸುದ್ದಿ

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕುಂಟಾಲಪಳಿಕೆ ನಿವಾಸಿ ಹರೀಶ್ ಆಚಾರ್ಯರ ಶವ ಬಾವಿಯಲ್ಲಿ ಪತ್ತೆ:

ಅರಸಿನಮಕ್ಕಿ : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಶವ ಬಾವಿಯಲ್ಲಿ ಪತ್ತೆಯಾದ ಪ್ರಕರಣ ಅರಸಿನಮಕ್ಕಿ ಯಲ್ಲಿ ನಡೆದಿದೆ.
ಇಲ್ಲಿಯ ಕುಂಟಾಲಪಳಿಕೆ ನಿವಾಸಿ ಹರೀಶ್ ಆಚಾರ್ಯ (40ವ.)ರವರು ಎರಡು ದಿನದಿಂದ ನಾಪತ್ತೆಯಾಗಿದ್ದು, ಇಂದು (ಜು.30)ಬೆಳಗ್ಗೆ ಅವರ ತಂದೆ ಮನೆಯ ಬಾವಿಯಲ್ಲಿ ಶವ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ತಂದೆ ತಾಯಿ ಅಕ್ಕಾಪಕ್ಕದಲ್ಲಿ ಬೇರೆ ಬೇರೆ ಮನೆಗಳಲ್ಲಿ ವಾಸಿಸುತ್ತಿದ್ದು ಹರೀಶ್ ತಾಯಿ ಮನೆಯಲ್ಲಿ ವಾಸಿಸುತ್ತಿದ್ದರು. ಹರೀಶ್ ಅವಿವಾಹಿತರು. ಹರೀಶ್ ಆಚಾರ್ಯ ಅವರು ಆಕಸ್ಮಿಕವಾಗಿ ‌ಬಾವಿಗೆ ಬಿದ್ದರೊ, ಅಥವಾ ಇನ್ನೇನಾದರೂ ಘಟನೆ ನಡೆದಿರಬಹುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಪುನೀತ್ ಕೆರೆಹಳ್ಳಿಯನ್ನು ಬಿಡುಗಡೆ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ಮರೋಡಿ: ಅಕ್ರಮ ಕಸಾಯಿಖಾನೆಗೆ ಪೊಲೀಸರ ದಾಳಿ – ಗೋಮಾಂಸ ಮಾರಾಟಕ್ಕೆ ಯತ್ನಿಸಿದ ಅಜಿದ್ ಬಂಧನ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya

ಅಕ್ರಮ ಜೂಜಾಟದ ಮೇಲೆ ವೇಣೂರು ಪೊಲೀಸರ ದಾಳಿ: 17 ಮಂದಿ ಆರೋಪಿಗಳ ಬಂಧನ

Suddi Udaya

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

Suddi Udaya

ಬಂದಾರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ರಿಕ್ಷಾ ಚಾಲಕ ಸಹಿತ ಇಬ್ಬರ ಬಂಧನ

Suddi Udaya
error: Content is protected !!