23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅರಸಿನಮಕ್ಕಿ ಇದರ 2022- 2023ನೇ ಸಾಲಿನ ವಾರ್ಷಿಕ ಮಹಾಸಭೆಯು ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿ ಯಲ್ಲಿ ಜು.30 ರಂದು ಜರುಗಿತು.

ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ವಹಿಸಿದ್ದರು. ವೇದಿಕೆಯಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ರಾಜು ಕೆ., ನಿರ್ದೇಶಕರು ಉಪಸ್ಥಿತರಿದ್ದರು.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ತ್ಯಾಂಪಣ್ಣ ಶೆಟ್ಟಿಗಾರ್ ವರದಿ ಓದಿದರು.

ಮೊದಲಿಗೆ ನಿಧನರಾದ ಸಂಘದ ಸದಸ್ಯರಿಗೆ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಕಳೆದ ವರ್ಷ ಎಸ್. ಎಸ್. ಎಲ್. ಸಿ ಹಾಗೂ ಪಿಯುಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ಮಕ್ಕಳನ್ನು ಗೌರವಿಸಲಾಯಿತು. ನಿವೃತ್ತ ಯೋಧ ಮಹಾಬಲ ಕೆ. ಮುದ್ದಿಗೆ ಇವರನ್ನು ಸನ್ಮಾನಿಸಲಾಯಿತು.

ಶಾಶ್ವತ ಪ್ರಾರ್ಥಿಸಿದರು. ನಿರ್ದೇಶಕ ರತೀಶ್ ಬಿ. ಸ್ವಾಗತಿಸಿದರು. ಗುಮಾಸ್ತೆ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿ, ನಿರ್ದೇಶಕ ಮುರಳೀಧರ ಶೆಟ್ಟಿಗಾರ್ ಧನ್ಯವಾದವಿತ್ತರು.

Related posts

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya

ನಾಡಿನಾದ್ಯಂತ ನವರಾತ್ರಿ ಸಂಭ್ರಮ; ಕರಾವಳಿಯಲ್ಲಿ ಮಾರ್ನೆಮಿ ವೇಷಗಳ ಸದ್ದು ಆರಂಭ

Suddi Udaya

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾಡಾನೆ ನಿರಂತರ

Suddi Udaya
error: Content is protected !!