25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅರಸಿನಮಕ್ಕಿ ಇದರ 2022- 2023ನೇ ಸಾಲಿನ ವಾರ್ಷಿಕ ಮಹಾಸಭೆಯು ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿ ಯಲ್ಲಿ ಜು.30 ರಂದು ಜರುಗಿತು.

ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ವಹಿಸಿದ್ದರು. ವೇದಿಕೆಯಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ರಾಜು ಕೆ., ನಿರ್ದೇಶಕರು ಉಪಸ್ಥಿತರಿದ್ದರು.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ತ್ಯಾಂಪಣ್ಣ ಶೆಟ್ಟಿಗಾರ್ ವರದಿ ಓದಿದರು.

ಮೊದಲಿಗೆ ನಿಧನರಾದ ಸಂಘದ ಸದಸ್ಯರಿಗೆ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಕಳೆದ ವರ್ಷ ಎಸ್. ಎಸ್. ಎಲ್. ಸಿ ಹಾಗೂ ಪಿಯುಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ಮಕ್ಕಳನ್ನು ಗೌರವಿಸಲಾಯಿತು. ನಿವೃತ್ತ ಯೋಧ ಮಹಾಬಲ ಕೆ. ಮುದ್ದಿಗೆ ಇವರನ್ನು ಸನ್ಮಾನಿಸಲಾಯಿತು.

ಶಾಶ್ವತ ಪ್ರಾರ್ಥಿಸಿದರು. ನಿರ್ದೇಶಕ ರತೀಶ್ ಬಿ. ಸ್ವಾಗತಿಸಿದರು. ಗುಮಾಸ್ತೆ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿ, ನಿರ್ದೇಶಕ ಮುರಳೀಧರ ಶೆಟ್ಟಿಗಾರ್ ಧನ್ಯವಾದವಿತ್ತರು.

Related posts

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಜ.14: ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

Suddi Udaya
error: Content is protected !!