25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕುಂಟಾಲಪಳಿಕೆ ನಿವಾಸಿ ಹರೀಶ್ ಆಚಾರ್ಯರ ಶವ ಬಾವಿಯಲ್ಲಿ ಪತ್ತೆ:

ಅರಸಿನಮಕ್ಕಿ : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಶವ ಬಾವಿಯಲ್ಲಿ ಪತ್ತೆಯಾದ ಪ್ರಕರಣ ಅರಸಿನಮಕ್ಕಿ ಯಲ್ಲಿ ನಡೆದಿದೆ.
ಇಲ್ಲಿಯ ಕುಂಟಾಲಪಳಿಕೆ ನಿವಾಸಿ ಹರೀಶ್ ಆಚಾರ್ಯ (40ವ.)ರವರು ಎರಡು ದಿನದಿಂದ ನಾಪತ್ತೆಯಾಗಿದ್ದು, ಇಂದು (ಜು.30)ಬೆಳಗ್ಗೆ ಅವರ ತಂದೆ ಮನೆಯ ಬಾವಿಯಲ್ಲಿ ಶವ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ತಂದೆ ತಾಯಿ ಅಕ್ಕಾಪಕ್ಕದಲ್ಲಿ ಬೇರೆ ಬೇರೆ ಮನೆಗಳಲ್ಲಿ ವಾಸಿಸುತ್ತಿದ್ದು ಹರೀಶ್ ತಾಯಿ ಮನೆಯಲ್ಲಿ ವಾಸಿಸುತ್ತಿದ್ದರು. ಹರೀಶ್ ಅವಿವಾಹಿತರು. ಹರೀಶ್ ಆಚಾರ್ಯ ಅವರು ಆಕಸ್ಮಿಕವಾಗಿ ‌ಬಾವಿಗೆ ಬಿದ್ದರೊ, ಅಥವಾ ಇನ್ನೇನಾದರೂ ಘಟನೆ ನಡೆದಿರಬಹುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ನಡ: ಆಟ ಆಡುತ್ತಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Suddi Udaya

ಬೆಳ್ತಂಗಡಿ: ಚಿನ್ನಯ್ಯನಿಗೆ ಜಿಲ್ಲಾ ಕೋರ್ಟ್ ನಲ್ಲಿ ಜಾಮೀನು ಮಂಜೂರು

Suddi Udaya

ಅಕ್ರಮ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸ್ ದಾಳಿ: ದನದ ಮಾಂಸ ಹಾಗೂ ಇಬ್ಬರು ಆರೋಪಿಗಳ ಬಂಧನ

Suddi Udaya

ಚಾರ್ಮಾಡಿಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿಯನ್ನು ವಶಪಡಿಸಿಕೊಂಡ ಧರ್ಮಸ್ಥಳ ಪೊಲೀಸರು

Suddi Udaya

ಬೆಳ್ತಂಗಡಿ: ಆಟೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಲ್ಲವ ಸಂಘಟನೆಗಳ ಆಗ್ರಹ

Suddi Udaya
error: Content is protected !!