September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಸುಳ್ಯದ ಕೆ. ವಿ. ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಕೆ. ವಿ. ಜಿ. ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಸೌತಡ್ಕ ಗಣೇಶ್ ಕಲಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರವು ಜು.30 ರಂದು ಜರುಗಿತು.

ಕಾರ್ಯಕ್ರಮವನ್ನು ಡಾ. ಮೋಹನ್ ದಾಸ್ ಗೌಡ ಕೊಕ್ಕಡ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸೌತಡ್ಕ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪಾಡಿ ವಹಿಸಿದ್ದರು.

ವೇದಿಕೆಯಲ್ಲಿ ಡಾ. ಎಂ. ಎಂ. ದಯಾಕರ್ ಉಜಿರೆ, ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಆರ್. ಎಸ್. ಎಸ್. ಮುಖಂಡ ಕೃಷ್ಣ ಭಟ್, ಕೊಕ್ಕಡ ಗ್ರಾ. ಪಂ.ಅಧ್ಯಕ್ಷ ಯೋಗೀಶ್ ಅಲಂಬಿಲ, ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಯಾನಂದ ಹೆಗ್ಡೆ ಸ್ವಾಗತಿಸಿದರು. ಕೇಶವ ಗೌಡ ಕೊಲ್ಲಾಜೆಪಲ್ಕೆ ಕಾರ್ಯಕ್ರಮ ನಿರೂಪಿಸಿ, ಸಮಿತಿ ಸದಸ್ಯ ಪುರಂದರ ಗೌಡ ಕಡಿರ ಧನ್ಯವಾದವಿತ್ತರು.

Related posts

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್ ನೂತನ ಆಡಳಿತ ಸಮಿತಿ ರಚನೆ

Suddi Udaya

ಧರ್ಮಸ್ಥಳದಿಂದ ಆನ್‌ಲೈನ್ ಜಾಗೃತಿ ಕಾರ್ಯಕ್ರಮ; ಕುಂಭಶ್ರೀ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ವೀಕ್ಷಣೆ

Suddi Udaya

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!