23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದೆ , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ ನೀಡಿದೆ.

ಶತಮಾನಗಳಿಂದ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಜೀವನ ಕಟ್ಟಿಕೊಂಡಿರುವ ಸಾವಿರಾರು ಕುಟುಂಬಗಳನ್ನು ಬೀದಿಪಾಲು ಮಾಡುವ ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಮುಂದಾದರೆ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ರಕ್ತಪಾತವಾದರೂ ಸರಿ , ಯೋಜನೆಯ ವಿರುದ್ಧ ಮಾಡು ಇಲ್ಲವೇ ಮಡಿ ಎನ್ನುವ ಹೋರಾಟವನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ. ಕಾಡುಮೃಗಗಳ ಜೊತೆಗೆ ಸೆಣಸಾಡಿ ಜೀವನ ಕಟ್ಟಿಕೊಂಡಿರುವ ನಮಗೆ ಸರ್ಕಾರದ ಜನವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಗೊತ್ತಿದೆ ಎಂದು ಸಂಘಟನೆಯ ಜಿಲ್ಲಾ , ತಾಲೂಕು ಅಧ್ಯಕ್ಷ ವಸಂತ ನಡ , ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ ಎಚ್ಚರಿಕೆ ನೀಡಿದ್ದಾರೆ. ಆಗಸ್ಟ್ 1 ರಂದು ದ.ಕ ಜಿಲ್ಲೆಗೆ ಭೇಟಿ ನೀಡುವ ರಾಜ್ಯದ ಮುಖ್ಯಮಂತ್ರಿಗಳು ಈ ಬಗ್ಗೆ ಸ್ಪಷ್ಟನೆ ನೀಡಬೇಕು , ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದ ಯಾವುದೇ ಸಚಿವರು ಜಿಲ್ಲೆಗೆ ಭೇಟಿ ನೀಡಿದರೂ ಕಪ್ಪು ಬಾವುಟ ಪ್ರದರ್ಶಿಸಬೇಕಾಗುತ್ತದೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರ ಬಲವಾಗಿ ವಿರೋಧಿಸಿದ ಕಸ್ತೂರಿ ರಂಗನ್ ವರದಿಯನ್ನು ಇದೀಗ ಏಕಾಏಕಿ ಜಾರಿಗೆ ಮುಂದಾಗಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ.

ಗ್ಯಾರಂಟಿಗಳ ಆಧಾರದಲ್ಲಿ ಅಧಿಕಾರ ವಹಿಸಿಕೊಂಡು ಇದೀಗ ಮತ್ತೊಂದೆಡೆ ಜನರ ಜೀವನದ ಜೊತೆಗೆ ಚೆಲ್ಲಾಟವಾಡಿದರೆ ನಿಮ್ಮನ್ನು ಜನರು ಮೆಚ್ಚಲಾರರು ಎಂಬ ಸಾಮಾನ್ಯ ಜ್ಞಾನ ಅರಣ್ಯ ಸಚಿವರಿಗೆ ಇಲ್ಲವೇ ? ಸ್ವಾತಂತ್ರ್ಯ ಲಭಿಸಿ 76 ವರ್ಷಗಳಾದರೂ ಇಂದಿಗೂ ಮೂಲಭೂತ ಸೌಕರ್ಯಗಳಾದ ರಸ್ತೆ , ವಿದ್ಯುತ್ ವಂಚಿತರಾದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಶತಮಾನಗಳಿಂದ ವಾಸಿಸುವ ಜನರಿಗೆ ಬದುಕುವ ಹಕ್ಕುಗಳನ್ನು ಖಾತ್ರಿಪಡಿಸಬೇಕಾದ ರಾಜ್ಯ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿಗೆ ತಂದರೆ ಮುಂದಾಗುವ ಅಹಿತಕರ ಘಟನೆಗಳಿಗೆ ನಾವು ಹೊಣೆಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Related posts

ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

Suddi Udaya

ಧರ್ಮಸ್ಥಳ: ಮಾನ್ವಿ ಶ್ರೀ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಸೆ.6: ಗರ್ಡಾಡಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಅಬಲೆಯರ ಪುನರ್ವಸತಿ ಕೇಂದ್ರ “ಸೇವಾಶ್ರಮ”ದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬ ಆಚರಣೆ

Suddi Udaya

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!