July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

ಬೆಳ್ತಂಗಡಿ: ಕೇಂದ್ರ ಸರಕಾರವು ಸಾರ್ವತ್ರಿಕ ಸೇವಾ ಬಾಧ್ಯತೆ ನಿಧಿ (ಯುನಿವರ್ಸಲ್ ಸರ್ವೀಸ್ ಆಬ್ಲಿಗೇಶನ್ ಫಂಡ್ )ಯಡಿ ದೇಶಾದ್ಯಂತ ಕುಗ್ರಾಮಗಳ ಸಹಿತ ಸ್ವಲ್ಪವೂ ನೆಟ್ ವರ್ಕ್ ತಲುಪದ 3 ಲಕ್ಷಕ್ಕೂ ಅಧಿಕ ಸ್ಥಳಗಳಲ್ಲಿ ಸ್ಥಾಪಿಸಲಿರುವ ಬಿಎಸ್ಸೆನ್ನೆಲ್ 4ಜಿ ಸೇವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳಲಿದೆ. ಇದರಿಂದ ದ.ಕ ಜಿಲ್ಲೆಯಲ್ಲಿ ನೆಟ್ ವರ್ಕ್ ಲಭಿಸಲಿದೆ.

ಸರಕಾರಿ ಸ್ವಾಮ್ಯದ ಬಿಎಸ್ಸೆನ್ನೆಲ್‌ನ ಗುಣಮಟ್ಟ ಹೆಚ್ಚಿಸುವ ಸಲುವಾಗಿ ಕೇಂದ್ರ ಸರಕಾರವು ಮೆಕ್ ಇನ್ ಇಂಡಿಯಾದಡಿ ಟಿಸಿಎಸ್ (ಟಾಟಾ ಕನ್ನಲ್ಟೆನ್ಸಿ ಸರ್ವೀಸ್) ಮತ್ತು ಐಟಿಐ ಲಿ, ಒಪ್ಪಂದದೊಂದಿಗೆ ದೇಶದ ವಿವಿಧೆಡೆ 4ಜಿ ನೆಟ್ ವರ್ಕ್ ಟವರ್ ಸ್ಥಾಪಿಸಲಿದೆ. ಈಗಿರುವ 4ಜಿಯನ್ನೇ ಮುಂದೆ 5ಜಿ ಸೇವೆಯಾಗಿ ಪರಿವರ್ತಿಸಲು ಕೂಡ ಸಾಧ್ಯವಿದೆ.

ಬೆಳ್ತಂಗಡಿ ತಾಲೂಕಿನ ಪೆರಾಡಿ, ಅಣಿಯೂರು, ಬದನಾಜೆ, ನಿಟ್ಟಡ್ಕ, ಬರೆಂಗಾಯ, ಚಾರ್ಮಾಡಿ ಕಾಂಜಾಲ್, ಮಾಲಾಡಿ ಕರಿಯಬೆ, ಕೆಮ್ಮಟೆ ,ಕೊಡಿಯಾಲುಬೈಲು, ಕೊಲ್ಪಾಡಿ, ಕುಪ್ಲೊಟ್ಟು, ಬೈಪಾಡಿ, ಮುಂಡೂರು, ಪೆರ್ನಡ್ಕ ಮಿಯಲಾಜೆ, ಎಳನೀರು, ಪೆರ್ಲ ಈ ಸ್ಥಳಗಳಲ್ಲಿ ಟವರ್ ನಿರ್ಮಾಣಗೊಳ್ಳಲಿವೆ.

Related posts

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಗುರುವಾಯನಕರೆ: ಕಾವ್ಯಶ್ರೀ ಆಜೇರು ಹಾಡಿರುವ “ಮಲೆನಾಡ ಮಡಿಲಿನಲ್ಲಿ” ಜಿನಭಕ್ತಿಗೀತೆ ಲೋಕಾರ್ಪಣೆ

Suddi Udaya

ಗೆಜ್ಜೆಗಿರಿ ಮೇಳದ “ಪ್ರಚಂಡ ಮಹಿಷಾಸುರ” ಪ್ರಸಂಗ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಡುಗಡೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ವತಿಯಿಂದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರಿಗೆ ಸನ್ಮಾನ

Suddi Udaya
error: Content is protected !!