25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

ಬೆಳ್ತಂಗಡಿ: ಕೇಂದ್ರ ಸರಕಾರವು ಸಾರ್ವತ್ರಿಕ ಸೇವಾ ಬಾಧ್ಯತೆ ನಿಧಿ (ಯುನಿವರ್ಸಲ್ ಸರ್ವೀಸ್ ಆಬ್ಲಿಗೇಶನ್ ಫಂಡ್ )ಯಡಿ ದೇಶಾದ್ಯಂತ ಕುಗ್ರಾಮಗಳ ಸಹಿತ ಸ್ವಲ್ಪವೂ ನೆಟ್ ವರ್ಕ್ ತಲುಪದ 3 ಲಕ್ಷಕ್ಕೂ ಅಧಿಕ ಸ್ಥಳಗಳಲ್ಲಿ ಸ್ಥಾಪಿಸಲಿರುವ ಬಿಎಸ್ಸೆನ್ನೆಲ್ 4ಜಿ ಸೇವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳಲಿದೆ. ಇದರಿಂದ ದ.ಕ ಜಿಲ್ಲೆಯಲ್ಲಿ ನೆಟ್ ವರ್ಕ್ ಲಭಿಸಲಿದೆ.

ಸರಕಾರಿ ಸ್ವಾಮ್ಯದ ಬಿಎಸ್ಸೆನ್ನೆಲ್‌ನ ಗುಣಮಟ್ಟ ಹೆಚ್ಚಿಸುವ ಸಲುವಾಗಿ ಕೇಂದ್ರ ಸರಕಾರವು ಮೆಕ್ ಇನ್ ಇಂಡಿಯಾದಡಿ ಟಿಸಿಎಸ್ (ಟಾಟಾ ಕನ್ನಲ್ಟೆನ್ಸಿ ಸರ್ವೀಸ್) ಮತ್ತು ಐಟಿಐ ಲಿ, ಒಪ್ಪಂದದೊಂದಿಗೆ ದೇಶದ ವಿವಿಧೆಡೆ 4ಜಿ ನೆಟ್ ವರ್ಕ್ ಟವರ್ ಸ್ಥಾಪಿಸಲಿದೆ. ಈಗಿರುವ 4ಜಿಯನ್ನೇ ಮುಂದೆ 5ಜಿ ಸೇವೆಯಾಗಿ ಪರಿವರ್ತಿಸಲು ಕೂಡ ಸಾಧ್ಯವಿದೆ.

ಬೆಳ್ತಂಗಡಿ ತಾಲೂಕಿನ ಪೆರಾಡಿ, ಅಣಿಯೂರು, ಬದನಾಜೆ, ನಿಟ್ಟಡ್ಕ, ಬರೆಂಗಾಯ, ಚಾರ್ಮಾಡಿ ಕಾಂಜಾಲ್, ಮಾಲಾಡಿ ಕರಿಯಬೆ, ಕೆಮ್ಮಟೆ ,ಕೊಡಿಯಾಲುಬೈಲು, ಕೊಲ್ಪಾಡಿ, ಕುಪ್ಲೊಟ್ಟು, ಬೈಪಾಡಿ, ಮುಂಡೂರು, ಪೆರ್ನಡ್ಕ ಮಿಯಲಾಜೆ, ಎಳನೀರು, ಪೆರ್ಲ ಈ ಸ್ಥಳಗಳಲ್ಲಿ ಟವರ್ ನಿರ್ಮಾಣಗೊಳ್ಳಲಿವೆ.

Related posts

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ-ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Suddi Udaya

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆ: ಹರೀಶ್ ಪೂಂಜ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!