September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯಿಂದ ಆಟಿ ಕೂಟ ಆಚರಣೆ: ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳು

ಬೆಳ್ತಂಗಡಿ : ಕೂಟ ಮಹಾ ಜಗತ್ತು ಬೆಳ್ತಂಗಡಿ ಇದರ ಮಹಿಳಾ ವೇದಿಕೆಯಿಂದ ಆಟಿ ಕೂಟವು ಮಹಿಳಾ ಸದಸ್ಯರಲ್ಲೊಬ್ಬರಾದ ಲಕ್ಷ್ಮಿ ಮಾಧವ ಹೊಳ್ಳ ಇವರ ಮನೆಯಲ್ಲಿ ಜು. 31ರಂದು ಜರುಗಿತು. ಕೂಟ ಮಹಾಜಗತ್ತು ಬೆಳ್ತಂಗಡಿ ಇದರ ಅಧ್ಯಕ್ಷ ವಿಶ್ವನಾಥ ಹೊಳ್ಳ ಮತ್ತು ಮಹಿಳಾವೇದಿಕೆಯ ಅಧ್ಯಕ್ಷೆಯಾಗಿರುವ ಶ್ರೀಮತಿ ನಳಿನಿ ಹೊಳ್ಳ ಕಾರ್ಯಕ್ರಮ ವನ್ನು ಉದ್ಘಾಟಿಸಿದರು.

ಮಹಿಳಾ ವೇದಿಕೆಯ ನಿಕಟಪೂರ್ವ ಅಧ್ಯಕ್ಷೆ ಪದ್ಮಾಕ್ಷಿ ಎಂ ರಾವ್ ಇವರು ಆಟಿಯ ಆಚರಣೆಯ ಬಗ್ಗೆ,ಮತ್ತು ಆಟಿಯಲ್ಲಿ ತಯಾರಿಸುವ ಆಹಾರಗಳ ಬಗ್ಗೆ ತಿಳಿಸಿಕೊಡುತ್ತಾ ಮುಂದಿನ ಪೀಳಿಗೆಗೂ ಈ ಆಚರಣೆಗಳೆಲ್ಲ ವರ್ಗಾವಣೆ ಆಗಬೇಕು ಎಂಬ ಆಶಯ ವ್ಯಕ್ತಪಡಿಸಿದರು.

ಮಹಿಳಾ ಸದಸ್ಯೆಯರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ತಮ್ಮ ಮನೆಗಳಿಂದ ಆಟಿಯ ವಿಶೇಷ ಖಾದ್ಯಗಳನ್ನು ತಯಾರಿಸಿ ತಂದು ಹಂಚಿಕೊಂಡು ಸೇವಿಸಿ ಸಂತೋಷಪಟ್ಟರು.

ಮಕ್ಕಳಿಗೆ ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಅದರಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಮಹಿಳಾ ವೇದಿಕೆಯ ಕಾರ್ಯದರ್ಶಿ ಅಕ್ಷತಾ ಅಡೂರ್ ಮತ್ತು ಹಿರಿಯ ಸದಸ್ಯೆ ಲಲಿತಾ ರಾವ್ ಉಪಸ್ಥಿತರಿದ್ದರು.
ವೇದಿಕೆಯ ಸದಸ್ಯೆಯರಾದ ಮಮತಾ ಕಾರ್ಯಕ್ರಮ ನಿರೂಪಣೆಯನ್ನು ನೆರವೇರಿಸಿದರು. ವಿದ್ಯಾಶ್ರೀ ಅಡೂರ್ ವಂದಿಸಿದರು.

Related posts

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಆಟಿಡೊಂಜಿ ಕೂಟ ದಿನಾಚರಣೆ

Suddi Udaya

ಉಜಿರೆ ಹೆಗ್ಡೆ ಮೆಡಿಕಲ್ ವತಿಯಿಂದ ಆರ್ಥಿಕ ಸಂಕಷ್ಟಗೊಳಗಾದವರಿಗೆ ಉಚಿತ ಔಷಧಿ

Suddi Udaya

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya

ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’

Suddi Udaya
error: Content is protected !!