September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ

ಬೆಳ್ತಂಗಡಿ ತಾಲೂಕಿನಲ್ಲಿ ಸಮಾಜ ಸೇವೆ ಮಾಡಬೇಕೆಂಬ ಕನಸು ಹೊತ್ತು ಮಂಗಳೂರಿನ ಉದಯ ಪೂಜಾರಿ ಬಳ್ಳಾಲ್‌ ಬಾಗ್ ಸ್ಥಾಪಕ ಅಧ್ಯಕ್ಷತೆಯ ಬಿರುವೆರ್ ಕುಡ್ಲ ಸಂಘಟನೆಯನ್ನು ಸುವರ್ಣ ಪ್ರತಿಷ್ಠಾನ ಅಧ್ಯಕ್ಷರು ಸಂಪತ್‌ ಬಿ. ಸುವರ್ಣ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕಕ್ಕೆ ಐದು ವರ್ಷಗಳನ್ನು ಪೂರೈಸಿದೆ.

ಫೆಬ್ರವರಿ 13, 2018ರಂದು ಪ್ರಾರಂಭಗೊಂಡ ಈ ಸಂಘ ಇಂದಿಗೆ 48 ಸೇವಾ ಯೋಜನೆ ಪೂರ್ಣ ಗೊಂಡಿದೆ.
ಬೆಳ್ತಂಗಡಿ ಘಟಕದ 49, ಹಾಗೂ 50ನೇ ಸೇವಾ ಯೋಜನೆಯನ್ನು ಬೆಳ್ತಂಗಡಿ ತಾಲೂಕಿನ ಕುಕ್ಕವು ಗ್ರಾಮದ ದಿ. ಲಿಂಗಪ್ಪ ಕುಂಬಾರ ಇವರ ತಂಗಿ ಕುಮಾರಿ ಕಲ್ಯಾಣಿ ಇವರಿಗೆ ನೀಡಿದರು. ಇವರ ಕುಟುಂಬ ದಲ್ಲಿ ಆಧಾರ ಸ್ಥಂಬ
ವಾಗಿದ್ದ ಲಿಂಗಪ್ಪ ಕುಂಬಾರರು ಅಗಲಿದ್ದು, ಕಲ್ಯಾಣಿಯವರು ಒಬ್ಬಂಟಿಯಾಗಿ ಕಷ್ಟದ ಜೀವನ ನಡೆಸುತ್ತಿದ್ದಾರೆ.
ಅಲ್ಲದೇ ಕ್ಯಾನ್ಸರ್ ನಿಂದ ಬಳಲುತ್ತಿರುವ ಬಂಟ್ವಾಳ ತಾಲೂಕಿನ ಬಾಲ್ಯರಾಬೆಟ್ಟು ಇರ್ವತ್ತೂರು ನೈನಾಡು ಮನೆಯ ಗಂಗಾಧರ್ ಈ ಎರಡು ಕುಟುಂಬಕ್ಕೆ ಘಟಕದಿಂದ ಫಲಾನುಭವಿಗಳಿಗೆ ಚೆಕ್ಕ್ ನ್ನು ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜ ಇವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ರಾಜೇಶ್ ಕೋಟ್ಯಾನ್, ಕಾರ್ಯದರ್ಶಿ ಅರುಣ್ ಪೂಜಾರಿ, ಹರೀಶ್ ಕೋಟ್ಯಾನ್ ಮದ್ದಡ್ಕ, ವಿನಯ್ ಗುರಿಪಲ್ಲ, ದಿನೇಶ್ ಕೋಟ್ಯಾನ್, ಸುರೇಶ್ ಪೂಜಾರಿ, ಅನಿಲ್, ಗುರುಪ್ರಸಾದ್ ಉಪಸ್ಥಿತರಿದ್ದರು.

Related posts

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಜಿಲ್ಲೆಯ ಬಸದಿಗಳನ್ನು ಆರಕ್ಷಿತ ಸ್ಮಾರಕ ಘೋಷಣೆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಜಿಲ್ಲಾಧಿಕಾರಿಗಳ ಮೂಲಕ ಆಕ್ಷೇಪನ ಸಲ್ಲಿಕೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ ಇಕೋ-ವಿಷನ್ ‘ ಸಂಘ ಪದಗ್ರಹಣ ಸಮಾರಂಭ

Suddi Udaya

ಸೆ.6: ಎಕ್ಸೆಲ್‌ನಲ್ಲಿ ಗೋಕುಲದ ಗೋಪಾಲ–ಬೃಂದಾವನದ ರಾಧೆ ಸ್ಪರ್ಧೆ: ಎಲ್ಲರಿಗೂ ಮುಕ್ತ ಅವಕಾಶ

Suddi Udaya

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya
error: Content is protected !!