26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿ

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

ನವದೆಹಲಿಯ ನವ ಶ್ರೀ ಕಲೆ ಮತ್ತು ಸಂಸ್ಕೃತಿ ಸಂಸ್ಥೆ ಇತ್ತೀಚೆಗೆ ನಡೆಸಿದ ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ’ ಶಿಲ್ಪ್ ಆಕಾರ್’ ನಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ವಿಭಾಗದ ಪ್ರಥಮ ಎಂ.ಎಸ್ಸಿ ಅಧ್ಯಯನ ನಡೆಸುತ್ತಿರುವ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ ದೊರೆತಿದೆ.

ಇವರು ಮಂಗಳೂರು ಕಾಳಿಕಾಂಭ ವಿನಾಯಕ ದೇವಸ್ಥಾನದ ಕೆಯ್ಯೂರು ಕೂಡುವಳಿಕೆ ಮೊಕ್ತೇಸರರಾದ ಕೆ ಹರಿಶ್ಚಂದ್ರ ಆಚಾರ್ಯ ಕೋಡಂಬು ಹಾಗೂ ಶುಭ ದಂಪತಿಯ ಪುತ್ರಿಯಗಿದ್ದಾರೆ.

‘ ಶಿಲ್ಪ್ ಆಕಾರ್’ ಕಲೆ ಮತ್ತು ಕರಕುಶಲತೆಗೆ ಸಂಭಂದಿಸಿದ ರಾಷ್ಟ್ರ ಮಟ್ಟದ ಸ್ಪರ್ಧೆಯಾಗಿದೆ . ನವದೆಹಲಿಯ ಆರ್ಟಿಜೆನ್ ಆರ್ಟ್ ಗ್ಯಾಲರಿಯಲ್ಲಿ ನಡೆದ ರಾಷ್ಟ ಮಟ್ಟದ ಡ್ರಾಯಿಂಗ್, ಪೈಂಟಿಂಗ್, ಆರ್ಟ್ ಮತ್ತು ಕ್ರಾಫ್ಟ್’ ಪ್ರದರ್ಶನದಲ್ಲಿ ಇವರ ಕರಕುಶಲತೆಯನ್ನು ಪ್ರದರ್ಶಿಸಲಾಯಿತು.,

‘ಆರ್ಟಿಜೆನ್ ಆರ್ಟ್’ ಗ್ಯಾಲರಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಇವರಿಗೆ ಪ್ರಶಸ್ತಿಯೊಂದಿಗೆ ನಗದು ಬಹುಮಾನವನ್ನು ವಿತರಿಸಲಾಯಿತು.

Related posts

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ 9 ಸದಸ್ಯ ಸ್ಥಾನಕ್ಕೆ 28 ಮಂದಿ ಅರ್ಜಿ

Suddi Udaya

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

Suddi Udaya

ಹತ್ಯಡ್ಕ: ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

Suddi Udaya
error: Content is protected !!