ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿ

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

ನವದೆಹಲಿಯ ನವ ಶ್ರೀ ಕಲೆ ಮತ್ತು ಸಂಸ್ಕೃತಿ ಸಂಸ್ಥೆ ಇತ್ತೀಚೆಗೆ ನಡೆಸಿದ ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ’ ಶಿಲ್ಪ್ ಆಕಾರ್’ ನಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ವಿಭಾಗದ ಪ್ರಥಮ ಎಂ.ಎಸ್ಸಿ ಅಧ್ಯಯನ ನಡೆಸುತ್ತಿರುವ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ ದೊರೆತಿದೆ.

ಇವರು ಮಂಗಳೂರು ಕಾಳಿಕಾಂಭ ವಿನಾಯಕ ದೇವಸ್ಥಾನದ ಕೆಯ್ಯೂರು ಕೂಡುವಳಿಕೆ ಮೊಕ್ತೇಸರರಾದ ಕೆ ಹರಿಶ್ಚಂದ್ರ ಆಚಾರ್ಯ ಕೋಡಂಬು ಹಾಗೂ ಶುಭ ದಂಪತಿಯ ಪುತ್ರಿಯಗಿದ್ದಾರೆ.

‘ ಶಿಲ್ಪ್ ಆಕಾರ್’ ಕಲೆ ಮತ್ತು ಕರಕುಶಲತೆಗೆ ಸಂಭಂದಿಸಿದ ರಾಷ್ಟ್ರ ಮಟ್ಟದ ಸ್ಪರ್ಧೆಯಾಗಿದೆ . ನವದೆಹಲಿಯ ಆರ್ಟಿಜೆನ್ ಆರ್ಟ್ ಗ್ಯಾಲರಿಯಲ್ಲಿ ನಡೆದ ರಾಷ್ಟ ಮಟ್ಟದ ಡ್ರಾಯಿಂಗ್, ಪೈಂಟಿಂಗ್, ಆರ್ಟ್ ಮತ್ತು ಕ್ರಾಫ್ಟ್’ ಪ್ರದರ್ಶನದಲ್ಲಿ ಇವರ ಕರಕುಶಲತೆಯನ್ನು ಪ್ರದರ್ಶಿಸಲಾಯಿತು.,

‘ಆರ್ಟಿಜೆನ್ ಆರ್ಟ್’ ಗ್ಯಾಲರಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಇವರಿಗೆ ಪ್ರಶಸ್ತಿಯೊಂದಿಗೆ ನಗದು ಬಹುಮಾನವನ್ನು ವಿತರಿಸಲಾಯಿತು.

Related posts

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಮೂರು ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟದ ಪ್ರಕರಣ ಪತ್ತೆ: ಪಿಕಪ್ ಸಹಿತ ವಾಹನದಲ್ಲಿದ್ದ 6 ದನ, 2 ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರು ವಶ

Suddi Udaya

ಮಳೆಗಾಲದ ಮೆಗಾ ಆಫರ್ ಸೇಲ್‌ಗೆ ಚಾಲನೆ – ಸುನಿಲ್ ಸಿಲ್ಕ್ ಸಾರೀಸ್‌ನಲ್ಲಿ ಆಕರ್ಷಕ ರಿಯಾಯಿತಿಗಳ ಮಹಾಪರ್ವ

Suddi Udaya

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!