22.7 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಅಳದಂಗಡಿ: ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಸಭಾ ಭವನದಲ್ಲಿ ಜು.31ರಂದು ನಡೆಯಿತು.

ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗಣೇಶ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರುವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಕೃಷ್ಣರಾಜ ಭಟ್, ದ.ಕ.ಹಾಲು ಒಕ್ಕೂಟ ವಿಸ್ತರಣಾಧಿಕಾರಿ ಸುಚಿತ್ರಾ, ಪಶು ವೈದ್ಯಾಧಿಕಾರಿ ಡಾ.ಗಣಪತಿ ರಾವ್,ಪೂಜಾ, ನಿರ್ದೇಶಕರಾದ ಶಿವ ಭಟ್, ಶಶಿಧರ ಶೆಟ್ಟಿ, ಪ್ರಶಾಂತ್ ವೇಗಸ್, ಆನಂದ ಮಡಿವಾಳ, ಗಣೇಶ್ ದೇವಾಡಿಗ, ಸುರೇಶ್ ಕುಲಾಲ್, ಗಿರಿಜಾ, ಪುಷ್ಪಾವತಿ, ಲಲಿತಾ, ಸುನಂದ ಉಪಸ್ಥಿತರಿದ್ದರು. ನಿರ್ದೇಶಕ ಶಿವ ಭಟ್ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಲ್ಫ್ರೇಡ್ ಫೆರ್ನಾಂಡೀಸ್ ವರದಿ ಸಾಲಿನ ಲೆಕ್ಕಪತ್ರ ಮಂಡಿಸಿದರು. ಸಂಘದ ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ ಮಾಡಲಾಯಿತು‌.ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸಂಘದ ಸದಸ್ಯ ಲಾರೆನ್ಸ್ ಪೀರೆರಾ ಅವರ ಮೂರು ದನಗಳು‌ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವೀಗಿಡಾಗಿದ್ದು ಅವರಿಗೆ 40 ಸಾವಿರ ಮೊತ್ತದ ಚೆಕ್ ವಿತರಿಸಲಾಯಿತು.

Related posts

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

Suddi Udaya

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

Suddi Udaya

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

Suddi Udaya

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!