24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

ಬೆಳ್ತಂಗಡಿ: ಕೇಂದ್ರ ಸರಕಾರವು ಸಾರ್ವತ್ರಿಕ ಸೇವಾ ಬಾಧ್ಯತೆ ನಿಧಿ (ಯುನಿವರ್ಸಲ್ ಸರ್ವೀಸ್ ಆಬ್ಲಿಗೇಶನ್ ಫಂಡ್ )ಯಡಿ ದೇಶಾದ್ಯಂತ ಕುಗ್ರಾಮಗಳ ಸಹಿತ ಸ್ವಲ್ಪವೂ ನೆಟ್ ವರ್ಕ್ ತಲುಪದ 3 ಲಕ್ಷಕ್ಕೂ ಅಧಿಕ ಸ್ಥಳಗಳಲ್ಲಿ ಸ್ಥಾಪಿಸಲಿರುವ ಬಿಎಸ್ಸೆನ್ನೆಲ್ 4ಜಿ ಸೇವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳಲಿದೆ. ಇದರಿಂದ ದ.ಕ ಜಿಲ್ಲೆಯಲ್ಲಿ ನೆಟ್ ವರ್ಕ್ ಲಭಿಸಲಿದೆ.

ಸರಕಾರಿ ಸ್ವಾಮ್ಯದ ಬಿಎಸ್ಸೆನ್ನೆಲ್‌ನ ಗುಣಮಟ್ಟ ಹೆಚ್ಚಿಸುವ ಸಲುವಾಗಿ ಕೇಂದ್ರ ಸರಕಾರವು ಮೆಕ್ ಇನ್ ಇಂಡಿಯಾದಡಿ ಟಿಸಿಎಸ್ (ಟಾಟಾ ಕನ್ನಲ್ಟೆನ್ಸಿ ಸರ್ವೀಸ್) ಮತ್ತು ಐಟಿಐ ಲಿ, ಒಪ್ಪಂದದೊಂದಿಗೆ ದೇಶದ ವಿವಿಧೆಡೆ 4ಜಿ ನೆಟ್ ವರ್ಕ್ ಟವರ್ ಸ್ಥಾಪಿಸಲಿದೆ. ಈಗಿರುವ 4ಜಿಯನ್ನೇ ಮುಂದೆ 5ಜಿ ಸೇವೆಯಾಗಿ ಪರಿವರ್ತಿಸಲು ಕೂಡ ಸಾಧ್ಯವಿದೆ.

ಬೆಳ್ತಂಗಡಿ ತಾಲೂಕಿನ ಪೆರಾಡಿ, ಅಣಿಯೂರು, ಬದನಾಜೆ, ನಿಟ್ಟಡ್ಕ, ಬರೆಂಗಾಯ, ಚಾರ್ಮಾಡಿ ಕಾಂಜಾಲ್, ಮಾಲಾಡಿ ಕರಿಯಬೆ, ಕೆಮ್ಮಟೆ ,ಕೊಡಿಯಾಲುಬೈಲು, ಕೊಲ್ಪಾಡಿ, ಕುಪ್ಲೊಟ್ಟು, ಬೈಪಾಡಿ, ಮುಂಡೂರು, ಪೆರ್ನಡ್ಕ ಮಿಯಲಾಜೆ, ಎಳನೀರು, ಪೆರ್ಲ ಈ ಸ್ಥಳಗಳಲ್ಲಿ ಟವರ್ ನಿರ್ಮಾಣಗೊಳ್ಳಲಿವೆ.

Related posts

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಳದಂಗಡಿ ಸ.ಪ.ಪೂ. ಕಾಲೇಜಿಗೆ ಕಂಪ್ಯೂಟರ್ ಸ್ಮಾರ್ಟ್ ತರಗತಿ ಉದ್ಘಾಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya
error: Content is protected !!