ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

ಬೆಳ್ತಂಗಡಿ: ಕೇಂದ್ರ ಸರಕಾರವು ಸಾರ್ವತ್ರಿಕ ಸೇವಾ ಬಾಧ್ಯತೆ ನಿಧಿ (ಯುನಿವರ್ಸಲ್ ಸರ್ವೀಸ್ ಆಬ್ಲಿಗೇಶನ್ ಫಂಡ್ )ಯಡಿ ದೇಶಾದ್ಯಂತ ಕುಗ್ರಾಮಗಳ ಸಹಿತ ಸ್ವಲ್ಪವೂ ನೆಟ್ ವರ್ಕ್ ತಲುಪದ 3 ಲಕ್ಷಕ್ಕೂ ಅಧಿಕ ಸ್ಥಳಗಳಲ್ಲಿ ಸ್ಥಾಪಿಸಲಿರುವ ಬಿಎಸ್ಸೆನ್ನೆಲ್ 4ಜಿ ಸೇವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳಲಿದೆ. ಇದರಿಂದ ದ.ಕ ಜಿಲ್ಲೆಯಲ್ಲಿ ನೆಟ್ ವರ್ಕ್ ಲಭಿಸಲಿದೆ.

ಸರಕಾರಿ ಸ್ವಾಮ್ಯದ ಬಿಎಸ್ಸೆನ್ನೆಲ್‌ನ ಗುಣಮಟ್ಟ ಹೆಚ್ಚಿಸುವ ಸಲುವಾಗಿ ಕೇಂದ್ರ ಸರಕಾರವು ಮೆಕ್ ಇನ್ ಇಂಡಿಯಾದಡಿ ಟಿಸಿಎಸ್ (ಟಾಟಾ ಕನ್ನಲ್ಟೆನ್ಸಿ ಸರ್ವೀಸ್) ಮತ್ತು ಐಟಿಐ ಲಿ, ಒಪ್ಪಂದದೊಂದಿಗೆ ದೇಶದ ವಿವಿಧೆಡೆ 4ಜಿ ನೆಟ್ ವರ್ಕ್ ಟವರ್ ಸ್ಥಾಪಿಸಲಿದೆ. ಈಗಿರುವ 4ಜಿಯನ್ನೇ ಮುಂದೆ 5ಜಿ ಸೇವೆಯಾಗಿ ಪರಿವರ್ತಿಸಲು ಕೂಡ ಸಾಧ್ಯವಿದೆ.

ಬೆಳ್ತಂಗಡಿ ತಾಲೂಕಿನ ಪೆರಾಡಿ, ಅಣಿಯೂರು, ಬದನಾಜೆ, ನಿಟ್ಟಡ್ಕ, ಬರೆಂಗಾಯ, ಚಾರ್ಮಾಡಿ ಕಾಂಜಾಲ್, ಮಾಲಾಡಿ ಕರಿಯಬೆ, ಕೆಮ್ಮಟೆ ,ಕೊಡಿಯಾಲುಬೈಲು, ಕೊಲ್ಪಾಡಿ, ಕುಪ್ಲೊಟ್ಟು, ಬೈಪಾಡಿ, ಮುಂಡೂರು, ಪೆರ್ನಡ್ಕ ಮಿಯಲಾಜೆ, ಎಳನೀರು, ಪೆರ್ಲ ಈ ಸ್ಥಳಗಳಲ್ಲಿ ಟವರ್ ನಿರ್ಮಾಣಗೊಳ್ಳಲಿವೆ.

Related posts

ನಾವೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

Suddi Udaya

ಜೂ. 21: ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವತಿಯಿಂದ 12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಶ್ರೀ ಗುರು ಮಾಣಿಕ್ಯ ಪ್ರಶಸ್ತಿ ಸೆ. 5ರಂದು ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

Suddi Udaya

ಶ್ರೀ ಧ ಮಂ ಆಂ.ಮಾ. ಶಾಲೆಗೆ ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಭೇಟಿ

Suddi Udaya
error: Content is protected !!