23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯಿಂದ ಆಟಿ ಕೂಟ ಆಚರಣೆ: ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳು

ಬೆಳ್ತಂಗಡಿ : ಕೂಟ ಮಹಾ ಜಗತ್ತು ಬೆಳ್ತಂಗಡಿ ಇದರ ಮಹಿಳಾ ವೇದಿಕೆಯಿಂದ ಆಟಿ ಕೂಟವು ಮಹಿಳಾ ಸದಸ್ಯರಲ್ಲೊಬ್ಬರಾದ ಲಕ್ಷ್ಮಿ ಮಾಧವ ಹೊಳ್ಳ ಇವರ ಮನೆಯಲ್ಲಿ ಜು. 31ರಂದು ಜರುಗಿತು. ಕೂಟ ಮಹಾಜಗತ್ತು ಬೆಳ್ತಂಗಡಿ ಇದರ ಅಧ್ಯಕ್ಷ ವಿಶ್ವನಾಥ ಹೊಳ್ಳ ಮತ್ತು ಮಹಿಳಾವೇದಿಕೆಯ ಅಧ್ಯಕ್ಷೆಯಾಗಿರುವ ಶ್ರೀಮತಿ ನಳಿನಿ ಹೊಳ್ಳ ಕಾರ್ಯಕ್ರಮ ವನ್ನು ಉದ್ಘಾಟಿಸಿದರು.

ಮಹಿಳಾ ವೇದಿಕೆಯ ನಿಕಟಪೂರ್ವ ಅಧ್ಯಕ್ಷೆ ಪದ್ಮಾಕ್ಷಿ ಎಂ ರಾವ್ ಇವರು ಆಟಿಯ ಆಚರಣೆಯ ಬಗ್ಗೆ,ಮತ್ತು ಆಟಿಯಲ್ಲಿ ತಯಾರಿಸುವ ಆಹಾರಗಳ ಬಗ್ಗೆ ತಿಳಿಸಿಕೊಡುತ್ತಾ ಮುಂದಿನ ಪೀಳಿಗೆಗೂ ಈ ಆಚರಣೆಗಳೆಲ್ಲ ವರ್ಗಾವಣೆ ಆಗಬೇಕು ಎಂಬ ಆಶಯ ವ್ಯಕ್ತಪಡಿಸಿದರು.

ಮಹಿಳಾ ಸದಸ್ಯೆಯರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ತಮ್ಮ ಮನೆಗಳಿಂದ ಆಟಿಯ ವಿಶೇಷ ಖಾದ್ಯಗಳನ್ನು ತಯಾರಿಸಿ ತಂದು ಹಂಚಿಕೊಂಡು ಸೇವಿಸಿ ಸಂತೋಷಪಟ್ಟರು.

ಮಕ್ಕಳಿಗೆ ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಅದರಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಮಹಿಳಾ ವೇದಿಕೆಯ ಕಾರ್ಯದರ್ಶಿ ಅಕ್ಷತಾ ಅಡೂರ್ ಮತ್ತು ಹಿರಿಯ ಸದಸ್ಯೆ ಲಲಿತಾ ರಾವ್ ಉಪಸ್ಥಿತರಿದ್ದರು.
ವೇದಿಕೆಯ ಸದಸ್ಯೆಯರಾದ ಮಮತಾ ಕಾರ್ಯಕ್ರಮ ನಿರೂಪಣೆಯನ್ನು ನೆರವೇರಿಸಿದರು. ವಿದ್ಯಾಶ್ರೀ ಅಡೂರ್ ವಂದಿಸಿದರು.

Related posts

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಅಳದಂಗಡಿ ಸೊಸೈಟಿಯಿಂದ ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ: ಸುವರ್ಣ ಸಂಭ್ರಮ-2026 ಚಾಲನೆ,ಕೃಷಿ ತರಬೇತುದಾರರಿಗೆ ಸನ್ಮಾನ,ಸಾಧಕ ಕೃಷಿಕರಿಗೆ ಗೌರವಾರ್ಪಣೆ: ದ.ಕ. ಜಿಲ್ಲೆಯ ಕೃಷಿಕರು ಚಂಚಲ ಮನಸ್ಥಿತಿಯವರು: ಶಾಸಕ ಹರೀಶ್ ಪೂಂಜ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯದಲ್ಲಿ ‘ನಗಬೇಕು ಆಗಾಗ ಬದುಕಿನೊಳಗೆ’ ತರಬೇತಿ ಕಾರ್ಯಕ್ರಮ

Suddi Udaya
error: Content is protected !!