22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆ


ಪ್ರತೀ ತಿಂಗಳು ಸಮಾಜಮುಖಿ ಕಾರ್ಯಕ್ರಮಗಳ ಆಯೋಜನೆ : ಹರೀಶ್ ಕಾರಿಂಜ

ಗುರುವಾಯನಕೆರೆ : ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆಯು ಜು.30ರಂದು ಗುರುವಾಯನಕೆರೆಯ ಕುಲಾಲ ಮಂದಿರದಲ್ಲಿ ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜರವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ಜರಗಿತು.
ಸಂಘದ ಕಾರ್ಯದರ್ಶಿ ಯತೀಶ್ ಸಿರಿಮಜಲು ಅವರು ವರದಿ ವಾಚಿಸಿ, ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ಅವರು ಮಾತನಾಡಿ, ಸಂಘದ ನೂತನ ಸಭಾಭವನ ನಿರ್ಮಾಣಕ್ಕೆ ಬ್ಯಾಂಕ್ ಸಾಲದ ಮೂಲಕ ಈಗಾಗಲೇ ಜಾಗ ಖರೀದಿಯ ಪ್ರಕ್ರಿಯೆ ಮುಗಿದಿದ್ದು, ಹಣಕಾಸಿನ ವ್ಯವಸ್ಥೆ ಆಗಬೇಕಿದೆ. ಶಾಸಕ ಹರೀಶ್ ಪೂಂಜರವರು ಭರವಸೆಯಿತ್ತ ರೂ. 1.50 ಕೋಟಿ ಅನುದಾನದ ಬಗ್ಗೆ ಅವರೊಂದಿಗೆ ಮಾತುಕತೆ ನಡೆಸಿದ್ದೇವೆ. ತಾಲೂಕಿನ ಸಮಾಜ ಬಂಧುಗಳು ಸಹಕಾರ ನೀಡಬೇಕು. ಆ ಮೂಲಕ ಬಲಿಷ್ಠ ಸಮುದಾಯವಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಗಲಿ. ಮುಂದಿನ ದಿನಗಳಲ್ಲಿ ಪ್ರತೀ ತಿಂಗಳು ಒಂದೊಂದು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಯೋಜನೆ ರೂಪಿಸುತ್ತೇವೆ, ಇದೇ ತಿಂಗಳ 13ರಂದು ಆಟಿಡೊಂಜಿ ದಿನ ಕೂಟ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ತಿಳಿಸಿದರು.
ಸಭೆಯ ಪರಿವೀಕ್ಷರಾಗಿದ್ದ ಸೋಮನಾಥ ಕೆ.ವಿ. ಅವರು ಮಾತನಾಡಿ, ಸಂಘದ ಕಾರ್ಯಚಟುವಟಿಕೆ ಶ್ಲಾಘಿಸಿ ತಾಲೂಕಿನಾದ್ಯಂತ ಇನ್ನಷ್ಟು ಒಗ್ಗಟ್ಟು ಮೂಡುವಂತಾಗಲಿ ಎಂದು ಆಶಿಸಿದರು. ಕಟ್ಟಡ ಸಮಿತಿ ಅಧ್ಯಕ್ಷರಾದ ಎಚ್. ಸೋಮಯ್ಯ ಹನೈನಡೆ ಅವರು ಮಾತನಾಡಿ, ಸಂಘದ ನೂತನ
ಕಟಡ ನಿರ್ಮಾಣ ನಮ್ಮೆಲ್ಲರ ಧ್ಯೇಯವಾಗಲಿ, ಈ ನಿಟ್ಟಿನಲ್ಲಿ ಎಲ್ಲಾ ಆಯಾಮಗಳಲ್ಲೂ ಶ್ರಮವಹಿಸಬೇಕಾದ ಅನಿವಾರ್ಯತೆ ಇದೆ ಎಂದರು.
ಸಂಘದ ಕಾರ್ಯಕಾರಿ ಸಮಿತಿಗೆ ಒಟ್ಟು 24 ಮಂದಿಯನ್ನು ಆಯ್ಕೆ ಮಾಡಲಾಯಿತು. ಸಂಘದ ಮಾಜಿ ಅಧ್ಯಕ್ಷರು ಹಿರಿಯರಾದ ಗೋವಿಂದ ಮೂಲ್ಯ, ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಕು| ಸ್ವಾತಿ ಪ್ರಾರ್ಥಿಸಿ, ಸಂಘದ ಉಪಾಧ್ಯಕ್ಷ ಎಚ್. ಪದ್ಮಕುಮಾರ್ ಸ್ವಾಗತಿಸಿದರು. ಕಟ್ಟಡ ಸಮಿತಿ ಕಾರ್ಯದರ್ಶಿ ಶಿಕ್ಷಕ ಜಗನ್ನಾಥ ಕುಲಾಲ್ ನಿರೂಪಿಸಿ, ಸಂಘದ ಕಾರ್ಯದರ್ಶಿ ಯತೀಶ್ ಸಿರಿಮಜಲು ವಂದಿಸಿದರು.

Related posts

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

Suddi Udaya
error: Content is protected !!