September 6, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆ


ಪ್ರತೀ ತಿಂಗಳು ಸಮಾಜಮುಖಿ ಕಾರ್ಯಕ್ರಮಗಳ ಆಯೋಜನೆ : ಹರೀಶ್ ಕಾರಿಂಜ

ಗುರುವಾಯನಕೆರೆ : ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆಯು ಜು.30ರಂದು ಗುರುವಾಯನಕೆರೆಯ ಕುಲಾಲ ಮಂದಿರದಲ್ಲಿ ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜರವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ಜರಗಿತು.
ಸಂಘದ ಕಾರ್ಯದರ್ಶಿ ಯತೀಶ್ ಸಿರಿಮಜಲು ಅವರು ವರದಿ ವಾಚಿಸಿ, ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ಅವರು ಮಾತನಾಡಿ, ಸಂಘದ ನೂತನ ಸಭಾಭವನ ನಿರ್ಮಾಣಕ್ಕೆ ಬ್ಯಾಂಕ್ ಸಾಲದ ಮೂಲಕ ಈಗಾಗಲೇ ಜಾಗ ಖರೀದಿಯ ಪ್ರಕ್ರಿಯೆ ಮುಗಿದಿದ್ದು, ಹಣಕಾಸಿನ ವ್ಯವಸ್ಥೆ ಆಗಬೇಕಿದೆ. ಶಾಸಕ ಹರೀಶ್ ಪೂಂಜರವರು ಭರವಸೆಯಿತ್ತ ರೂ. 1.50 ಕೋಟಿ ಅನುದಾನದ ಬಗ್ಗೆ ಅವರೊಂದಿಗೆ ಮಾತುಕತೆ ನಡೆಸಿದ್ದೇವೆ. ತಾಲೂಕಿನ ಸಮಾಜ ಬಂಧುಗಳು ಸಹಕಾರ ನೀಡಬೇಕು. ಆ ಮೂಲಕ ಬಲಿಷ್ಠ ಸಮುದಾಯವಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಗಲಿ. ಮುಂದಿನ ದಿನಗಳಲ್ಲಿ ಪ್ರತೀ ತಿಂಗಳು ಒಂದೊಂದು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಯೋಜನೆ ರೂಪಿಸುತ್ತೇವೆ, ಇದೇ ತಿಂಗಳ 13ರಂದು ಆಟಿಡೊಂಜಿ ದಿನ ಕೂಟ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ತಿಳಿಸಿದರು.
ಸಭೆಯ ಪರಿವೀಕ್ಷರಾಗಿದ್ದ ಸೋಮನಾಥ ಕೆ.ವಿ. ಅವರು ಮಾತನಾಡಿ, ಸಂಘದ ಕಾರ್ಯಚಟುವಟಿಕೆ ಶ್ಲಾಘಿಸಿ ತಾಲೂಕಿನಾದ್ಯಂತ ಇನ್ನಷ್ಟು ಒಗ್ಗಟ್ಟು ಮೂಡುವಂತಾಗಲಿ ಎಂದು ಆಶಿಸಿದರು. ಕಟ್ಟಡ ಸಮಿತಿ ಅಧ್ಯಕ್ಷರಾದ ಎಚ್. ಸೋಮಯ್ಯ ಹನೈನಡೆ ಅವರು ಮಾತನಾಡಿ, ಸಂಘದ ನೂತನ
ಕಟಡ ನಿರ್ಮಾಣ ನಮ್ಮೆಲ್ಲರ ಧ್ಯೇಯವಾಗಲಿ, ಈ ನಿಟ್ಟಿನಲ್ಲಿ ಎಲ್ಲಾ ಆಯಾಮಗಳಲ್ಲೂ ಶ್ರಮವಹಿಸಬೇಕಾದ ಅನಿವಾರ್ಯತೆ ಇದೆ ಎಂದರು.
ಸಂಘದ ಕಾರ್ಯಕಾರಿ ಸಮಿತಿಗೆ ಒಟ್ಟು 24 ಮಂದಿಯನ್ನು ಆಯ್ಕೆ ಮಾಡಲಾಯಿತು. ಸಂಘದ ಮಾಜಿ ಅಧ್ಯಕ್ಷರು ಹಿರಿಯರಾದ ಗೋವಿಂದ ಮೂಲ್ಯ, ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಕು| ಸ್ವಾತಿ ಪ್ರಾರ್ಥಿಸಿ, ಸಂಘದ ಉಪಾಧ್ಯಕ್ಷ ಎಚ್. ಪದ್ಮಕುಮಾರ್ ಸ್ವಾಗತಿಸಿದರು. ಕಟ್ಟಡ ಸಮಿತಿ ಕಾರ್ಯದರ್ಶಿ ಶಿಕ್ಷಕ ಜಗನ್ನಾಥ ಕುಲಾಲ್ ನಿರೂಪಿಸಿ, ಸಂಘದ ಕಾರ್ಯದರ್ಶಿ ಯತೀಶ್ ಸಿರಿಮಜಲು ವಂದಿಸಿದರು.

Related posts

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

Suddi Udaya

ಹೊಸಮಜಲುವಿನಲ್ಲಿ ಎಸ್‌ಜೆಎಮ್ ರೇಂಜ್ ಕಾನ್ಫರೆನ್ಸ್ ಸಂಪನ್ನ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾಷಣ ಸ್ಪರ್ಧೆ

Suddi Udaya

ಬಳಂಜ ಶಾಲೆಯ ಹಳೆ ವಿದ್ಯಾರ್ಥಿ ಪ್ರವೀಣ್ ಜೈನ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya
error: Content is protected !!