24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿ

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

ನವದೆಹಲಿಯ ನವ ಶ್ರೀ ಕಲೆ ಮತ್ತು ಸಂಸ್ಕೃತಿ ಸಂಸ್ಥೆ ಇತ್ತೀಚೆಗೆ ನಡೆಸಿದ ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ’ ಶಿಲ್ಪ್ ಆಕಾರ್’ ನಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ವಿಭಾಗದ ಪ್ರಥಮ ಎಂ.ಎಸ್ಸಿ ಅಧ್ಯಯನ ನಡೆಸುತ್ತಿರುವ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ ದೊರೆತಿದೆ.

ಇವರು ಮಂಗಳೂರು ಕಾಳಿಕಾಂಭ ವಿನಾಯಕ ದೇವಸ್ಥಾನದ ಕೆಯ್ಯೂರು ಕೂಡುವಳಿಕೆ ಮೊಕ್ತೇಸರರಾದ ಕೆ ಹರಿಶ್ಚಂದ್ರ ಆಚಾರ್ಯ ಕೋಡಂಬು ಹಾಗೂ ಶುಭ ದಂಪತಿಯ ಪುತ್ರಿಯಗಿದ್ದಾರೆ.

‘ ಶಿಲ್ಪ್ ಆಕಾರ್’ ಕಲೆ ಮತ್ತು ಕರಕುಶಲತೆಗೆ ಸಂಭಂದಿಸಿದ ರಾಷ್ಟ್ರ ಮಟ್ಟದ ಸ್ಪರ್ಧೆಯಾಗಿದೆ . ನವದೆಹಲಿಯ ಆರ್ಟಿಜೆನ್ ಆರ್ಟ್ ಗ್ಯಾಲರಿಯಲ್ಲಿ ನಡೆದ ರಾಷ್ಟ ಮಟ್ಟದ ಡ್ರಾಯಿಂಗ್, ಪೈಂಟಿಂಗ್, ಆರ್ಟ್ ಮತ್ತು ಕ್ರಾಫ್ಟ್’ ಪ್ರದರ್ಶನದಲ್ಲಿ ಇವರ ಕರಕುಶಲತೆಯನ್ನು ಪ್ರದರ್ಶಿಸಲಾಯಿತು.,

‘ಆರ್ಟಿಜೆನ್ ಆರ್ಟ್’ ಗ್ಯಾಲರಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಇವರಿಗೆ ಪ್ರಶಸ್ತಿಯೊಂದಿಗೆ ನಗದು ಬಹುಮಾನವನ್ನು ವಿತರಿಸಲಾಯಿತು.

Related posts

ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Suddi Udaya

ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya
error: Content is protected !!