25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

ಬಂಗಾಡಿ: ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದು, ಇಲ್ಲಿಯ ಕೆನರಾ ಬ್ಯಾಂಕ್‌ನಲ್ಲಿ ನಿತ್ಯ ವ್ಯವಹಾರಕ್ಕೆ ಗ್ರಾಹಕರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.


ಬಂಗಾಡಿ ಪರಿಸರದಲ್ಲಿ ಬಹಳಷ್ಟು ನೆಟ್‌ವರ್ಕ್ ಸಮಸ್ಯೆಯಿದೆ. ಇದರಿಂದಾಗಿ ಸರ್ವರ್ ಕೈಗೊಡುತ್ತಿದ್ದು, ಬ್ಯಾಂಕ್‌ನಲ್ಲಿ ಸಮರ್ಪಕ ಕಾರ್ಯನಿರ್ವಹಣೆಗೆ ಕಷ್ಟವಾಗಿದೆ. ಇದರಿಂದಾಗಿ ಗ್ರಾಹಕರು ತಮ್ಮ ಬ್ಯಾಂಕ್‌ನ ಒಂದು ಕಾರ್ಯಕ್ಕೆ ಮೂರು-ನಾಲ್ಕು ದಿನಗಳಿಂದ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿದಿನ ಬೆಳಿಗ್ಗೆಯೇ ಬ್ಯಾಂಕ್‌ನಲ್ಲಿ ಸರತಿ ಸಾಲು ಕಂಡು ಬರುತ್ತಿದೆ. ಸರ್ವರ್ ಕೈಗೊಡುವುದರಿಂದ ಬ್ಯಾಂಕಿನ ಅಧಿಕಾರಿಗಳು ಏನೂ ಮಾಡಲು ಸಾಧ್ಯವಾಗದೆ ಕೊನೆಗೆ ಬ್ಯಾಂಕ್‌ನ ಎದುರು ‘ನೆಟ್‌ವರ್ಕ್ ಇಲ್ಲ’ ಎಂಬ ಬೋರ್ಡ್‌ನ್ನು ನೇತಾಕಿದ್ದಾರೆ. ಆದರೆ ಸರ್ವರ್ ಸಮಸ್ಯೆ ಬಗ್ಗೆ ಮಾಹಿತಿ ಇಲ್ಲದ ಗ್ರಾಮೀಣ ಪ್ರದೇಶದ ಜನರು ಬ್ಯಾಂಕ್‌ನ ಸಿಬ್ಬಂದಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಈ ಬಗ್ಗೆ ಬ್ಯಾಂಕ್‌ನ ಉನ್ನತಾಧಿಕಾರಿಗಳು ಗಮನ ಹರಿಸಿ, ಈ ಸಮಸ್ಯೆಯನ್ನು ನಿವಾರಿಸುವಂತೆ ಗ್ರಾಹಕರ ಪರವಾಗಿ ಶೌಕತ್ ಆಲಿ ಅವರು ಆಗ್ರಹಿಸಿದ್ದಾರೆ.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಯಲ್ಲಿ 9 ವಿಭಾಗಗಳಲ್ಲಿ ಪ್ರಶಸ್ತಿ

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya

ಕನ್ಯಾಡಿ: ಗುರಿಪಳ್ಳ ಪ್ರವೀಣ್ ರೋಡ್ರಿಗಸ್ ರವರ ಮನೆಯ ಮೇಲೆ ಅಬಕಾರಿ ದಾಳಿ: 18 ಲೀ. ಕಳ್ಳಬಟ್ಟಿ ಸಾರಾಯಿ ವಶ

Suddi Udaya

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ 98.16% ಫಲಿತಾಂಶ

Suddi Udaya

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

Suddi Udaya
error: Content is protected !!