26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

ಬಂಗಾಡಿ: ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದು, ಇಲ್ಲಿಯ ಕೆನರಾ ಬ್ಯಾಂಕ್‌ನಲ್ಲಿ ನಿತ್ಯ ವ್ಯವಹಾರಕ್ಕೆ ಗ್ರಾಹಕರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.


ಬಂಗಾಡಿ ಪರಿಸರದಲ್ಲಿ ಬಹಳಷ್ಟು ನೆಟ್‌ವರ್ಕ್ ಸಮಸ್ಯೆಯಿದೆ. ಇದರಿಂದಾಗಿ ಸರ್ವರ್ ಕೈಗೊಡುತ್ತಿದ್ದು, ಬ್ಯಾಂಕ್‌ನಲ್ಲಿ ಸಮರ್ಪಕ ಕಾರ್ಯನಿರ್ವಹಣೆಗೆ ಕಷ್ಟವಾಗಿದೆ. ಇದರಿಂದಾಗಿ ಗ್ರಾಹಕರು ತಮ್ಮ ಬ್ಯಾಂಕ್‌ನ ಒಂದು ಕಾರ್ಯಕ್ಕೆ ಮೂರು-ನಾಲ್ಕು ದಿನಗಳಿಂದ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿದಿನ ಬೆಳಿಗ್ಗೆಯೇ ಬ್ಯಾಂಕ್‌ನಲ್ಲಿ ಸರತಿ ಸಾಲು ಕಂಡು ಬರುತ್ತಿದೆ. ಸರ್ವರ್ ಕೈಗೊಡುವುದರಿಂದ ಬ್ಯಾಂಕಿನ ಅಧಿಕಾರಿಗಳು ಏನೂ ಮಾಡಲು ಸಾಧ್ಯವಾಗದೆ ಕೊನೆಗೆ ಬ್ಯಾಂಕ್‌ನ ಎದುರು ‘ನೆಟ್‌ವರ್ಕ್ ಇಲ್ಲ’ ಎಂಬ ಬೋರ್ಡ್‌ನ್ನು ನೇತಾಕಿದ್ದಾರೆ. ಆದರೆ ಸರ್ವರ್ ಸಮಸ್ಯೆ ಬಗ್ಗೆ ಮಾಹಿತಿ ಇಲ್ಲದ ಗ್ರಾಮೀಣ ಪ್ರದೇಶದ ಜನರು ಬ್ಯಾಂಕ್‌ನ ಸಿಬ್ಬಂದಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಈ ಬಗ್ಗೆ ಬ್ಯಾಂಕ್‌ನ ಉನ್ನತಾಧಿಕಾರಿಗಳು ಗಮನ ಹರಿಸಿ, ಈ ಸಮಸ್ಯೆಯನ್ನು ನಿವಾರಿಸುವಂತೆ ಗ್ರಾಹಕರ ಪರವಾಗಿ ಶೌಕತ್ ಆಲಿ ಅವರು ಆಗ್ರಹಿಸಿದ್ದಾರೆ.

Related posts

ದಾರಿ ಮಧ್ಯೆ ಕಾರಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಕನ್ಯಾಡಿಯಲ್ಲಿ ಶ್ರೀ ಮಹಾಭಾರತ ಸರಣಿ ತಾಳಮದ್ದಳೆಯ ಉದ್ಘಾಟನೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಮಹಾಸಭೆ

Suddi Udaya

ನಾಲ್ಕೂರು: ಹುಂಬೆಜೆ ಮನೆಯ ಜನಾರ್ಧನ ಪೂಜಾರಿ ನಿಧನ

Suddi Udaya

ಸಿಲಿಂಡರ್ ಸಾಗಾಟದ ಲಾರಿ ಮತ್ತು ಎಳನೀರು ಸಾಗಾಟದ ಟೆಂಪೋ ಮುಖಾಮುಖಿ ಡಿಕ್ಕಿ: ಚಾಮಾ೯ಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya
error: Content is protected !!