25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಸಂಪನ್ನ

ಬಳಂಜ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಬಳಂಜ ಇದರ ಸಹಯೋಗದಲ್ಲಿ ಧಾನ್ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದೊಂದಿಗೆ ಜೂನಿಯರ್ ಜೆಸಿ ಸಪ್ತಾಹ ಸಮಾರೋಪಗೊಂಡಿತು.

ಜು.24 ರಂದು ಸರಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿ ಉದ್ಘಾಟನೆಗೊಂಡು , ವ್ಯಕ್ತಿತ್ವ ವಿಕಸನ ತರಬೇತಿ, ಅಶಕ್ತರಿಗೆ ಧಾನ್ ನೆರವು, ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ಸ್ವಚ್ಛತಾ ಕಾರ್ಯಕ್ರಮ, ನೇತ್ರದಾನದ ಬಗ್ಗೆ ಅರಿವು ಕಾರ್ಯಕ್ರಮ, ಹೊನೆಸ್ಟ್ ಶಾಪ್, ಮುಖಾಂತರ ಜು. 30 ರಂದು ನಾರಾಯಣ ಗುರು ಸಮುದಾಯದ ಭವನ ಬಳಂಜ ಇಲ್ಲಿ ಶಿಕ್ಷಕರಿಗೆ ಗೌರವ ಸಲ್ಲಿಸುವುದರೊಂದಿಗೆ ಸಮಾರೋಪಗೊಂಡಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಅಧ್ಯಕ್ಷರಾದ ರಾಮಕೃಷ್ಣ ಶರ್ಮಾ ವಹಿಸಿದ್ದರು,

ವೇದಿಕೆಯಲ್ಲಿ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಎಚ್. ಎಸ್ ಕಾರ್ಯಕ್ರಮ ಉದ್ಘಾಟಿಸಿ ಶುಭಕೋರಿದರು. ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಶಂಕರ್ ರಾವ್, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಧ್ಯಕ್ಷರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ, ವಿಜಯವಾಣಿ ಪತ್ರಿಕೆಯ ವರದಿಗಾರರಾದ ಮನೋಹರ್ ಬಳಂಜ, ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಸಂಚಾಲಕರಾದ ಹರೀಶ್ ವೈ ಚಂದ್ರಮ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಕಾರ್ಯದರ್ಶಿ ಸುಧೀರ್ ಕೆ.ಎನ್ ಪಾಲ್ಗೊಂಡಿದ್ದರು

ಘಟಕದ ಉಪಾಧ್ಯಕ್ಷರಾದ ರಂಜಿತ್ ಎಚ್ ಡಿ, ಮಹಿಳಾ ಸಂಯೋಜಕಿ ಮಮಿತ ಸುಧೀರ್ ಸದಸ್ಯ ಶೈಲೇಶ್, ಚಂದ್ರಹಾಸ ಬಳಂಜ ಉಪಸ್ಥಿತರಿದ್ದರು.

Related posts

ಕತಾರ್ ಕಕ್ಕಿಂಜೆ ಶರೀಅತ್‌ ಕಾಲೇಜು ನೂತನ ಸಮಿತಿಗೆ ಆಯ್ಕೆ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆ ಉದ್ಘಾಟನೆ

Suddi Udaya

ಬೆಳ್ತಂಗಡಿಯ ಸ್ವರ್ಣ ಶಿಲ್ಪಿ ಎಚ್. ಗೋಪಾಲ ಆಚಾರ್ಯ ರವರಿಗೆ ‘ಎಸ್.ಕೆ.ಜಿ.ಐ ಪಾಲ್ಕೆ ಪ್ರಶಸ್ತಿ”

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!