23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

ಇಂದಬೆಟ್ಟು: ತಾಲೂಕಿನ ಹೆಸರಾಂತ ಯುವ ಸಂಘಟನೆ ಕಳೆದ 10 ವರ್ಷಗಳಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಹಾಗೂ ಕ್ರೀಡಾ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ನವಭಾರತ್ ಗೆಳೆಯರ ಬಳಗದ ವತಿಯಿಂದ ಜು. 30 ರಂದು ಇಂದಬೆಟ್ಟು ಕಲ್ಲಾಜೆ ಶಾಲೆಯಲ್ಲಿ ಆಟಿಡೊಂಜಿ ದಿನ ಹಾಗೂ ವಿದ್ಯಾ ನಿಧಿ ವಿತರಣಾ ಕಾರ್ಯಕ್ರಮವು ನಡೆಯಿತು.

ಸಮಾರಂಭದ ಉದ್ಘಾಟನೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಆನಂದ ಕೊಪ್ಪದಕೋಡಿ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನವಭಾರತ್ ಗೆಳೆಯರ ಬಳಗವು ಸರ್ಕಾರಿ ಹಿರಿಯ ಪ್ರಾಥಮಿಕ ಕಲ್ಲಾಜೆ ಶಾಲೆಯಲ್ಲಿ ಒಂದನೇ ತರಗತಿಗೆ ದಾಖಲಾಗುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ಯೋಜನೆ ನವಭಾರತ್ ವಿದ್ಯಾನಿಧಿಯನ್ನು ಸಂಘದ ಪದಾಧಿಕಾರಿಗಳು ಶಾಲಾಭಿವೃದ್ಧಿ ಸಮಿತಿ ಅಧ್ಯಕರಿಗೆ ಹಾಗೂ ಶಿಕ್ಷಕರಿಗೆ ವಿತರಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶಾಲಾ ಶಿಕ್ಷಕಿ ಶ್ರೀಮತಿ ದೀಪಾ ಕಿರಣ್ ಮಾತಾಡಿ ವಿದ್ಯಾನಿಧಿ ಯೋಜನೆಗೆ ಧನ್ಯವಾದ ತಿಳಿಸಿದರು. ಅಧ್ಯಕ್ಷತೆಯನ್ನು ನವಭಾರತ್ ಗೆಳೆಯರ ಬಳಗದ ಅಧ್ಯಕ್ಷರಾದ ಅಶ್ವತ್ಥ್ ರಾಜ್ ಕಲ್ಲಾಜೆ ವಹಿಸಿದ್ದರು, ಗೌರವ ಅಧ್ಯಕ್ಷರಾದ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ಕಾರ್ಯದರ್ಶಿ ಸುಕೇಶ್ ನಡುಮನೆ, ಕೋಶಾಧಿಕಾರಿ ಯತೀಶ್ ನೆರೋಲ್ದ ಪಲ್ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಂತರ ನಡೆದ ವಿವಿಧ ಕ್ರೀಡೆಗಳಲ್ಲಿ ಸಂಘದ ಸದಸ್ಯರು, ಊರವರು, ಮಹಿಳೆಯರು ಹಾಗೂ ಮಕ್ಕಳು ಭಾಗವಹಿಸಿದ್ದರು. ಮಧ್ಯಾಹ್ನ ಸವಿ ರುಚಿಯಾದ ಭೋಜನ ಏರ್ಪಡಿಸಲಾಗಿತ್ತು.

Related posts

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

Suddi Udaya

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya

ಕುಪ್ಪೆಟ್ಟಿ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಸೌಂಡ್ ಸಿಸ್ಟಮ್ ಕೊಡುಗೆ

Suddi Udaya

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya
error: Content is protected !!