22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

ಇಂದಬೆಟ್ಟು: ತಾಲೂಕಿನ ಹೆಸರಾಂತ ಯುವ ಸಂಘಟನೆ ಕಳೆದ 10 ವರ್ಷಗಳಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಹಾಗೂ ಕ್ರೀಡಾ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ನವಭಾರತ್ ಗೆಳೆಯರ ಬಳಗದ ವತಿಯಿಂದ ಜು. 30 ರಂದು ಇಂದಬೆಟ್ಟು ಕಲ್ಲಾಜೆ ಶಾಲೆಯಲ್ಲಿ ಆಟಿಡೊಂಜಿ ದಿನ ಹಾಗೂ ವಿದ್ಯಾ ನಿಧಿ ವಿತರಣಾ ಕಾರ್ಯಕ್ರಮವು ನಡೆಯಿತು.

ಸಮಾರಂಭದ ಉದ್ಘಾಟನೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಆನಂದ ಕೊಪ್ಪದಕೋಡಿ ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ನವಭಾರತ್ ಗೆಳೆಯರ ಬಳಗವು ಸರ್ಕಾರಿ ಹಿರಿಯ ಪ್ರಾಥಮಿಕ ಕಲ್ಲಾಜೆ ಶಾಲೆಯಲ್ಲಿ ಒಂದನೇ ತರಗತಿಗೆ ದಾಖಲಾಗುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ಯೋಜನೆ ನವಭಾರತ್ ವಿದ್ಯಾನಿಧಿಯನ್ನು ಸಂಘದ ಪದಾಧಿಕಾರಿಗಳು ಶಾಲಾಭಿವೃದ್ಧಿ ಸಮಿತಿ ಅಧ್ಯಕರಿಗೆ ಹಾಗೂ ಶಿಕ್ಷಕರಿಗೆ ವಿತರಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶಾಲಾ ಶಿಕ್ಷಕಿ ಶ್ರೀಮತಿ ದೀಪಾ ಕಿರಣ್ ಮಾತಾಡಿ ವಿದ್ಯಾನಿಧಿ ಯೋಜನೆಗೆ ಧನ್ಯವಾದ ತಿಳಿಸಿದರು. ಅಧ್ಯಕ್ಷತೆಯನ್ನು ನವಭಾರತ್ ಗೆಳೆಯರ ಬಳಗದ ಅಧ್ಯಕ್ಷರಾದ ಅಶ್ವತ್ಥ್ ರಾಜ್ ಕಲ್ಲಾಜೆ ವಹಿಸಿದ್ದರು, ಗೌರವ ಅಧ್ಯಕ್ಷರಾದ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ಕಾರ್ಯದರ್ಶಿ ಸುಕೇಶ್ ನಡುಮನೆ, ಕೋಶಾಧಿಕಾರಿ ಯತೀಶ್ ನೆರೋಲ್ದ ಪಲ್ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಂತರ ನಡೆದ ವಿವಿಧ ಕ್ರೀಡೆಗಳಲ್ಲಿ ಸಂಘದ ಸದಸ್ಯರು, ಊರವರು, ಮಹಿಳೆಯರು ಹಾಗೂ ಮಕ್ಕಳು ಭಾಗವಹಿಸಿದ್ದರು. ಮಧ್ಯಾಹ್ನ ಸವಿ ರುಚಿಯಾದ ಭೋಜನ ಏರ್ಪಡಿಸಲಾಗಿತ್ತು.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya

ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಾರ್ಯಾಗಾರ ಮತ್ತು ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಕರಾಟೆ ಚಾಂಪಿಯನ್ ಶಿಪ್: ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya
error: Content is protected !!