37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿ ಯಥಾವತ್ತಾಗಿ ಜಾರಿಗೊಳಿಸಲಾಗುವುದು ಎಂದು ಅರಣ್ಯ ಸಚಿವರು ನೀಡಿರುವ ಹೇಳಿಕೆ ಅರಣ್ಯವಾಸಿಗಳಿಗೆ ಮರಣ ಶಾಸನ ವಾಗಲಿದೆ. ಬುಡಕಟ್ಟು ಸಮುದಾಯದ ಹಕ್ಕುಗಳಿಗಾಗಿ ಇರುವ ಅರಣ್ಯ ಹಕ್ಕು ಕಾಯ್ದೆ ಮತ್ತು ಇತರ ಪರಿಸರ ಸಂಬಂಧಿತ ಕಾನೂನುಗಳು ವ್ಯತಿರಿಕ್ತವಾಗಿದ್ದು ಅನೇಕ ನಿಯಾಮವಳಿಗಳಲ್ಲಿ ಗೊಂದಲ ಇರುವ ಕಾರಣಕ್ಕೆ ಅರಣ್ಯ ಹಕ್ಕು ಕಾಯ್ದೆ ಸಮರ್ಪಕವಾಗಿ ಅನುಷ್ಠಾನ ಆಗುತ್ತಿಲ್ಲ. ಬುಡಕಟ್ಟು ಸಮುದಾಯಗಳನ್ನು ಹೊರತುಪಡಿಸಿ ಅರಣ್ಯ ವನ್ನು ವ್ಯಾಖ್ಯಾನ ಮಾಡಲು ಸಾಧ್ಯವಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ಶಾಸಕರು, ಸಂಸದರು ಶಾಸನ ಸಭೆಯಲ್ಲಿ ಶಾಸನ ರಚನೆ ಮಾಡುವಾಗ ಮಾಡಿದ ನಿರ್ಲಕ್ಷ್ಯಕ್ಕೆ ಇಂದಿಗೂ ಬುಡಕಟ್ಟು ಸಮುದಾಯಗಳು ಗೊಂದಲದಲ್ಲಿ ದಿನದೂಡುವಂತಾಗಿದೆ. ರಾಜ್ಯ ಸಭೆಯಲ್ಲಿ ಅರಣ್ಯ ಕಾಯ್ದೆ ಗೆ ತಿದ್ದುಪಡಿ ಮಸೂದೆ ಮಂಡನೆ ಮಾಡುತ್ತಿರುವುದು ಕೂಡ ಅರಣ್ಯ ಹಕ್ಕು ಕಾಯ್ದೆಯನ್ನು ಮೊಟಕುಗೊಳಿಸಿದಂತಾಗುತ್ತದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಈ ವಿವೇಚನಾ ರಹಿತ ನಿರ್ಧಾರಗಳನ್ನು ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ ತೀವ್ರವಾಗಿ ಖಂಡಿಸುತ್ತದೆ. ಎಂದು ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷರಾದ ಹರೀಶ್ ಎಳನೀರು ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕಡಮಗುಂಡಿ, ಬೊಳ್ಳೆ ಜಲಪಾತ, ಗಡಾಯಿಕಲ್ಲು ಪ್ರವಾಸಿ ತಾಣಗಳಿಗೆ ಹೇರಿದ್ದ ನಿರ್ಬಂಧ ನಾಳೆಯಿಂದ (ಜ.9) ತೆರೆ

Suddi Udaya

ಕೊಕ್ಕಡ: ಸಂಕಷ್ಟದಲ್ಲಿರುವ ಕುಟುಂಬದ ಮನೆ ದುರಸ್ತಿಗೊಳಿಸಿ ಕೀಲಿಕೈ ಹಸ್ತಾಂತರ

Suddi Udaya
error: Content is protected !!