September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿ ಯಥಾವತ್ತಾಗಿ ಜಾರಿಗೊಳಿಸಲಾಗುವುದು ಎಂದು ಅರಣ್ಯ ಸಚಿವರು ನೀಡಿರುವ ಹೇಳಿಕೆ ಅರಣ್ಯವಾಸಿಗಳಿಗೆ ಮರಣ ಶಾಸನ ವಾಗಲಿದೆ. ಬುಡಕಟ್ಟು ಸಮುದಾಯದ ಹಕ್ಕುಗಳಿಗಾಗಿ ಇರುವ ಅರಣ್ಯ ಹಕ್ಕು ಕಾಯ್ದೆ ಮತ್ತು ಇತರ ಪರಿಸರ ಸಂಬಂಧಿತ ಕಾನೂನುಗಳು ವ್ಯತಿರಿಕ್ತವಾಗಿದ್ದು ಅನೇಕ ನಿಯಾಮವಳಿಗಳಲ್ಲಿ ಗೊಂದಲ ಇರುವ ಕಾರಣಕ್ಕೆ ಅರಣ್ಯ ಹಕ್ಕು ಕಾಯ್ದೆ ಸಮರ್ಪಕವಾಗಿ ಅನುಷ್ಠಾನ ಆಗುತ್ತಿಲ್ಲ. ಬುಡಕಟ್ಟು ಸಮುದಾಯಗಳನ್ನು ಹೊರತುಪಡಿಸಿ ಅರಣ್ಯ ವನ್ನು ವ್ಯಾಖ್ಯಾನ ಮಾಡಲು ಸಾಧ್ಯವಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ಶಾಸಕರು, ಸಂಸದರು ಶಾಸನ ಸಭೆಯಲ್ಲಿ ಶಾಸನ ರಚನೆ ಮಾಡುವಾಗ ಮಾಡಿದ ನಿರ್ಲಕ್ಷ್ಯಕ್ಕೆ ಇಂದಿಗೂ ಬುಡಕಟ್ಟು ಸಮುದಾಯಗಳು ಗೊಂದಲದಲ್ಲಿ ದಿನದೂಡುವಂತಾಗಿದೆ. ರಾಜ್ಯ ಸಭೆಯಲ್ಲಿ ಅರಣ್ಯ ಕಾಯ್ದೆ ಗೆ ತಿದ್ದುಪಡಿ ಮಸೂದೆ ಮಂಡನೆ ಮಾಡುತ್ತಿರುವುದು ಕೂಡ ಅರಣ್ಯ ಹಕ್ಕು ಕಾಯ್ದೆಯನ್ನು ಮೊಟಕುಗೊಳಿಸಿದಂತಾಗುತ್ತದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಈ ವಿವೇಚನಾ ರಹಿತ ನಿರ್ಧಾರಗಳನ್ನು ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ ತೀವ್ರವಾಗಿ ಖಂಡಿಸುತ್ತದೆ. ಎಂದು ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷರಾದ ಹರೀಶ್ ಎಳನೀರು ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ : ಆರು ಮಂದಿ ಯೂಟ್ಯೂಬರ್ ಗಳಿಗೆ ಎಸ್.ಐ.ಟಿ ಬುಲಾವ್

Suddi Udaya

ಉಜಿರೆಯ ಎಸ್ ಡಿ ಎಂ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಜೇಸಿಐ ವಿದ್ಯಾರ್ಥಿ ವೇತನ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya

ಬೆಳ್ತಂಗಡಿ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ವಾರ್ಷಿಕೋತ್ಸವ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya
error: Content is protected !!