September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ: ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದ್ದು , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ ಎಂಬ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ ಅರಣ್ಯವಾಸಿಗಳ ಬದುಕನ್ನು ನಾಶಮಾಡುವ ಹುನ್ನಾರವಾಗಿದೆ , ತಕ್ಷಣ ರಾಜ್ಯ ಸರ್ಕಾರ ತನ್ನ ಜನವಿರೋಧಿ ನೀತಿಯನ್ನು ಬದಲಾವಣೆ ಮಾಡದಿದ್ದರೆ ಬೀದಿಗಿಳಿದು ಜನರ ಬದುಕುವ ಹಕ್ಕನ್ನು ಉಳಿಸಿಕೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಎಚ್ಚರಿಕೆ ನೀಡಿದೆ.

ಶತಮಾನಗಳಿಂದ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಜೀವನ ಕಟ್ಟಿಕೊಂಡಿರುವ ಸಾವಿರಾರು ಕುಟುಂಬಗಳನ್ನು ಬೀದಿಪಾಲು ಮಾಡುವ ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಮುಂದಾದರೆ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ರಕ್ತಪಾತವಾದರೂ ಸರಿ , ಯೋಜನೆಯ ವಿರುದ್ಧ ಮಾಡು ಇಲ್ಲವೇ ಮಡಿ ಎನ್ನುವ ಹೋರಾಟವನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ. ಕಾಡುಮೃಗಗಳ ಜೊತೆಗೆ ಸೆಣಸಾಡಿ ಜೀವನ ಕಟ್ಟಿಕೊಂಡಿರುವ ನಮಗೆ ಸರ್ಕಾರದ ಜನವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಗೊತ್ತಿದೆ ಎಂದು ಸಂಘಟನೆಯ ಜಿಲ್ಲಾ , ತಾಲೂಕು ಅಧ್ಯಕ್ಷ ವಸಂತ ನಡ , ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ ಎಚ್ಚರಿಕೆ ನೀಡಿದ್ದಾರೆ. ಆಗಸ್ಟ್ 1 ರಂದು ದ.ಕ ಜಿಲ್ಲೆಗೆ ಭೇಟಿ ನೀಡುವ ರಾಜ್ಯದ ಮುಖ್ಯಮಂತ್ರಿಗಳು ಈ ಬಗ್ಗೆ ಸ್ಪಷ್ಟನೆ ನೀಡಬೇಕು , ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದ ಯಾವುದೇ ಸಚಿವರು ಜಿಲ್ಲೆಗೆ ಭೇಟಿ ನೀಡಿದರೂ ಕಪ್ಪು ಬಾವುಟ ಪ್ರದರ್ಶಿಸಬೇಕಾಗುತ್ತದೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರ ಬಲವಾಗಿ ವಿರೋಧಿಸಿದ ಕಸ್ತೂರಿ ರಂಗನ್ ವರದಿಯನ್ನು ಇದೀಗ ಏಕಾಏಕಿ ಜಾರಿಗೆ ಮುಂದಾಗಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ.

ಗ್ಯಾರಂಟಿಗಳ ಆಧಾರದಲ್ಲಿ ಅಧಿಕಾರ ವಹಿಸಿಕೊಂಡು ಇದೀಗ ಮತ್ತೊಂದೆಡೆ ಜನರ ಜೀವನದ ಜೊತೆಗೆ ಚೆಲ್ಲಾಟವಾಡಿದರೆ ನಿಮ್ಮನ್ನು ಜನರು ಮೆಚ್ಚಲಾರರು ಎಂಬ ಸಾಮಾನ್ಯ ಜ್ಞಾನ ಅರಣ್ಯ ಸಚಿವರಿಗೆ ಇಲ್ಲವೇ ? ಸ್ವಾತಂತ್ರ್ಯ ಲಭಿಸಿ 76 ವರ್ಷಗಳಾದರೂ ಇಂದಿಗೂ ಮೂಲಭೂತ ಸೌಕರ್ಯಗಳಾದ ರಸ್ತೆ , ವಿದ್ಯುತ್ ವಂಚಿತರಾದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಶತಮಾನಗಳಿಂದ ವಾಸಿಸುವ ಜನರಿಗೆ ಬದುಕುವ ಹಕ್ಕುಗಳನ್ನು ಖಾತ್ರಿಪಡಿಸಬೇಕಾದ ರಾಜ್ಯ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿಗೆ ತಂದರೆ ಮುಂದಾಗುವ ಅಹಿತಕರ ಘಟನೆಗಳಿಗೆ ನಾವು ಹೊಣೆಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಬಯಲಾಟ ಹಾಗೂ ಸನ್ಮಾನ

Suddi Udaya

ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕೋರ್ಟ್ ಗೆ ವರದಿ ಸಲ್ಲಿಕೆ: ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿರುವುದು ಧೃಡ

Suddi Udaya

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮುಂಡಾಜೆ: ಜಿ.ಎನ್.ಭಿಡೆ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿಎಂಬ್ರಾಡರಿ ಮತ್ತು ಫ್ಯಾಬ್ರಿಕ್ ಪೇಟಿಂಗ್ ತರಬೇತಿಯ ಸಮಾರೋಪ

Suddi Udaya

ಉರುವಾಲು: ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya
error: Content is protected !!