25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

ಬೆಳ್ತಂಗಡಿ: ಕೇಂದ್ರ ಸರಕಾರವು ಸಾರ್ವತ್ರಿಕ ಸೇವಾ ಬಾಧ್ಯತೆ ನಿಧಿ (ಯುನಿವರ್ಸಲ್ ಸರ್ವೀಸ್ ಆಬ್ಲಿಗೇಶನ್ ಫಂಡ್ )ಯಡಿ ದೇಶಾದ್ಯಂತ ಕುಗ್ರಾಮಗಳ ಸಹಿತ ಸ್ವಲ್ಪವೂ ನೆಟ್ ವರ್ಕ್ ತಲುಪದ 3 ಲಕ್ಷಕ್ಕೂ ಅಧಿಕ ಸ್ಥಳಗಳಲ್ಲಿ ಸ್ಥಾಪಿಸಲಿರುವ ಬಿಎಸ್ಸೆನ್ನೆಲ್ 4ಜಿ ಸೇವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳಲಿದೆ. ಇದರಿಂದ ದ.ಕ ಜಿಲ್ಲೆಯಲ್ಲಿ ನೆಟ್ ವರ್ಕ್ ಲಭಿಸಲಿದೆ.

ಸರಕಾರಿ ಸ್ವಾಮ್ಯದ ಬಿಎಸ್ಸೆನ್ನೆಲ್‌ನ ಗುಣಮಟ್ಟ ಹೆಚ್ಚಿಸುವ ಸಲುವಾಗಿ ಕೇಂದ್ರ ಸರಕಾರವು ಮೆಕ್ ಇನ್ ಇಂಡಿಯಾದಡಿ ಟಿಸಿಎಸ್ (ಟಾಟಾ ಕನ್ನಲ್ಟೆನ್ಸಿ ಸರ್ವೀಸ್) ಮತ್ತು ಐಟಿಐ ಲಿ, ಒಪ್ಪಂದದೊಂದಿಗೆ ದೇಶದ ವಿವಿಧೆಡೆ 4ಜಿ ನೆಟ್ ವರ್ಕ್ ಟವರ್ ಸ್ಥಾಪಿಸಲಿದೆ. ಈಗಿರುವ 4ಜಿಯನ್ನೇ ಮುಂದೆ 5ಜಿ ಸೇವೆಯಾಗಿ ಪರಿವರ್ತಿಸಲು ಕೂಡ ಸಾಧ್ಯವಿದೆ.

ಬೆಳ್ತಂಗಡಿ ತಾಲೂಕಿನ ಪೆರಾಡಿ, ಅಣಿಯೂರು, ಬದನಾಜೆ, ನಿಟ್ಟಡ್ಕ, ಬರೆಂಗಾಯ, ಚಾರ್ಮಾಡಿ ಕಾಂಜಾಲ್, ಮಾಲಾಡಿ ಕರಿಯಬೆ, ಕೆಮ್ಮಟೆ ,ಕೊಡಿಯಾಲುಬೈಲು, ಕೊಲ್ಪಾಡಿ, ಕುಪ್ಲೊಟ್ಟು, ಬೈಪಾಡಿ, ಮುಂಡೂರು, ಪೆರ್ನಡ್ಕ ಮಿಯಲಾಜೆ, ಎಳನೀರು, ಪೆರ್ಲ ಈ ಸ್ಥಳಗಳಲ್ಲಿ ಟವರ್ ನಿರ್ಮಾಣಗೊಳ್ಳಲಿವೆ.

Related posts

ಸೆ.15: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya
error: Content is protected !!