September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯಿಂದ ಆಟಿ ಕೂಟ ಆಚರಣೆ: ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳು

ಬೆಳ್ತಂಗಡಿ : ಕೂಟ ಮಹಾ ಜಗತ್ತು ಬೆಳ್ತಂಗಡಿ ಇದರ ಮಹಿಳಾ ವೇದಿಕೆಯಿಂದ ಆಟಿ ಕೂಟವು ಮಹಿಳಾ ಸದಸ್ಯರಲ್ಲೊಬ್ಬರಾದ ಲಕ್ಷ್ಮಿ ಮಾಧವ ಹೊಳ್ಳ ಇವರ ಮನೆಯಲ್ಲಿ ಜು. 31ರಂದು ಜರುಗಿತು. ಕೂಟ ಮಹಾಜಗತ್ತು ಬೆಳ್ತಂಗಡಿ ಇದರ ಅಧ್ಯಕ್ಷ ವಿಶ್ವನಾಥ ಹೊಳ್ಳ ಮತ್ತು ಮಹಿಳಾವೇದಿಕೆಯ ಅಧ್ಯಕ್ಷೆಯಾಗಿರುವ ಶ್ರೀಮತಿ ನಳಿನಿ ಹೊಳ್ಳ ಕಾರ್ಯಕ್ರಮ ವನ್ನು ಉದ್ಘಾಟಿಸಿದರು.

ಮಹಿಳಾ ವೇದಿಕೆಯ ನಿಕಟಪೂರ್ವ ಅಧ್ಯಕ್ಷೆ ಪದ್ಮಾಕ್ಷಿ ಎಂ ರಾವ್ ಇವರು ಆಟಿಯ ಆಚರಣೆಯ ಬಗ್ಗೆ,ಮತ್ತು ಆಟಿಯಲ್ಲಿ ತಯಾರಿಸುವ ಆಹಾರಗಳ ಬಗ್ಗೆ ತಿಳಿಸಿಕೊಡುತ್ತಾ ಮುಂದಿನ ಪೀಳಿಗೆಗೂ ಈ ಆಚರಣೆಗಳೆಲ್ಲ ವರ್ಗಾವಣೆ ಆಗಬೇಕು ಎಂಬ ಆಶಯ ವ್ಯಕ್ತಪಡಿಸಿದರು.

ಮಹಿಳಾ ಸದಸ್ಯೆಯರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ತಮ್ಮ ಮನೆಗಳಿಂದ ಆಟಿಯ ವಿಶೇಷ ಖಾದ್ಯಗಳನ್ನು ತಯಾರಿಸಿ ತಂದು ಹಂಚಿಕೊಂಡು ಸೇವಿಸಿ ಸಂತೋಷಪಟ್ಟರು.

ಮಕ್ಕಳಿಗೆ ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಅದರಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಮಹಿಳಾ ವೇದಿಕೆಯ ಕಾರ್ಯದರ್ಶಿ ಅಕ್ಷತಾ ಅಡೂರ್ ಮತ್ತು ಹಿರಿಯ ಸದಸ್ಯೆ ಲಲಿತಾ ರಾವ್ ಉಪಸ್ಥಿತರಿದ್ದರು.
ವೇದಿಕೆಯ ಸದಸ್ಯೆಯರಾದ ಮಮತಾ ಕಾರ್ಯಕ್ರಮ ನಿರೂಪಣೆಯನ್ನು ನೆರವೇರಿಸಿದರು. ವಿದ್ಯಾಶ್ರೀ ಅಡೂರ್ ವಂದಿಸಿದರು.

Related posts

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ವಾಣಿ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ನೇಜಿ ನಾಟಿ

Suddi Udaya

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಪರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಮತಯಾಚನೆ

Suddi Udaya
error: Content is protected !!