25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯಿಂದ ಆಟಿ ಕೂಟ ಆಚರಣೆ: ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳು

ಬೆಳ್ತಂಗಡಿ : ಕೂಟ ಮಹಾ ಜಗತ್ತು ಬೆಳ್ತಂಗಡಿ ಇದರ ಮಹಿಳಾ ವೇದಿಕೆಯಿಂದ ಆಟಿ ಕೂಟವು ಮಹಿಳಾ ಸದಸ್ಯರಲ್ಲೊಬ್ಬರಾದ ಲಕ್ಷ್ಮಿ ಮಾಧವ ಹೊಳ್ಳ ಇವರ ಮನೆಯಲ್ಲಿ ಜು. 31ರಂದು ಜರುಗಿತು. ಕೂಟ ಮಹಾಜಗತ್ತು ಬೆಳ್ತಂಗಡಿ ಇದರ ಅಧ್ಯಕ್ಷ ವಿಶ್ವನಾಥ ಹೊಳ್ಳ ಮತ್ತು ಮಹಿಳಾವೇದಿಕೆಯ ಅಧ್ಯಕ್ಷೆಯಾಗಿರುವ ಶ್ರೀಮತಿ ನಳಿನಿ ಹೊಳ್ಳ ಕಾರ್ಯಕ್ರಮ ವನ್ನು ಉದ್ಘಾಟಿಸಿದರು.

ಮಹಿಳಾ ವೇದಿಕೆಯ ನಿಕಟಪೂರ್ವ ಅಧ್ಯಕ್ಷೆ ಪದ್ಮಾಕ್ಷಿ ಎಂ ರಾವ್ ಇವರು ಆಟಿಯ ಆಚರಣೆಯ ಬಗ್ಗೆ,ಮತ್ತು ಆಟಿಯಲ್ಲಿ ತಯಾರಿಸುವ ಆಹಾರಗಳ ಬಗ್ಗೆ ತಿಳಿಸಿಕೊಡುತ್ತಾ ಮುಂದಿನ ಪೀಳಿಗೆಗೂ ಈ ಆಚರಣೆಗಳೆಲ್ಲ ವರ್ಗಾವಣೆ ಆಗಬೇಕು ಎಂಬ ಆಶಯ ವ್ಯಕ್ತಪಡಿಸಿದರು.

ಮಹಿಳಾ ಸದಸ್ಯೆಯರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ತಮ್ಮ ಮನೆಗಳಿಂದ ಆಟಿಯ ವಿಶೇಷ ಖಾದ್ಯಗಳನ್ನು ತಯಾರಿಸಿ ತಂದು ಹಂಚಿಕೊಂಡು ಸೇವಿಸಿ ಸಂತೋಷಪಟ್ಟರು.

ಮಕ್ಕಳಿಗೆ ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಅದರಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಮಹಿಳಾ ವೇದಿಕೆಯ ಕಾರ್ಯದರ್ಶಿ ಅಕ್ಷತಾ ಅಡೂರ್ ಮತ್ತು ಹಿರಿಯ ಸದಸ್ಯೆ ಲಲಿತಾ ರಾವ್ ಉಪಸ್ಥಿತರಿದ್ದರು.
ವೇದಿಕೆಯ ಸದಸ್ಯೆಯರಾದ ಮಮತಾ ಕಾರ್ಯಕ್ರಮ ನಿರೂಪಣೆಯನ್ನು ನೆರವೇರಿಸಿದರು. ವಿದ್ಯಾಶ್ರೀ ಅಡೂರ್ ವಂದಿಸಿದರು.

Related posts

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ಬಂದಾರು : ಶಾಸಕ ಹರೀಶ್ ಪೂಂಜರಿಂದ ಬೈಪಾಡಿ ಸರ್ಕಲ್ ಬಳಿ ರಿಕ್ಷಾ ತಂಗುದಾಣ ಲೋಕಾರ್ಪಣೆ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ತಣ್ಣೀರುಪಂತ ವಲಯದ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!