23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆ


ಪ್ರತೀ ತಿಂಗಳು ಸಮಾಜಮುಖಿ ಕಾರ್ಯಕ್ರಮಗಳ ಆಯೋಜನೆ : ಹರೀಶ್ ಕಾರಿಂಜ

ಗುರುವಾಯನಕೆರೆ : ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆಯು ಜು.30ರಂದು ಗುರುವಾಯನಕೆರೆಯ ಕುಲಾಲ ಮಂದಿರದಲ್ಲಿ ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜರವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ಜರಗಿತು.
ಸಂಘದ ಕಾರ್ಯದರ್ಶಿ ಯತೀಶ್ ಸಿರಿಮಜಲು ಅವರು ವರದಿ ವಾಚಿಸಿ, ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ಅವರು ಮಾತನಾಡಿ, ಸಂಘದ ನೂತನ ಸಭಾಭವನ ನಿರ್ಮಾಣಕ್ಕೆ ಬ್ಯಾಂಕ್ ಸಾಲದ ಮೂಲಕ ಈಗಾಗಲೇ ಜಾಗ ಖರೀದಿಯ ಪ್ರಕ್ರಿಯೆ ಮುಗಿದಿದ್ದು, ಹಣಕಾಸಿನ ವ್ಯವಸ್ಥೆ ಆಗಬೇಕಿದೆ. ಶಾಸಕ ಹರೀಶ್ ಪೂಂಜರವರು ಭರವಸೆಯಿತ್ತ ರೂ. 1.50 ಕೋಟಿ ಅನುದಾನದ ಬಗ್ಗೆ ಅವರೊಂದಿಗೆ ಮಾತುಕತೆ ನಡೆಸಿದ್ದೇವೆ. ತಾಲೂಕಿನ ಸಮಾಜ ಬಂಧುಗಳು ಸಹಕಾರ ನೀಡಬೇಕು. ಆ ಮೂಲಕ ಬಲಿಷ್ಠ ಸಮುದಾಯವಾಗಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಗಲಿ. ಮುಂದಿನ ದಿನಗಳಲ್ಲಿ ಪ್ರತೀ ತಿಂಗಳು ಒಂದೊಂದು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ಯೋಜನೆ ರೂಪಿಸುತ್ತೇವೆ, ಇದೇ ತಿಂಗಳ 13ರಂದು ಆಟಿಡೊಂಜಿ ದಿನ ಕೂಟ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ತಿಳಿಸಿದರು.
ಸಭೆಯ ಪರಿವೀಕ್ಷರಾಗಿದ್ದ ಸೋಮನಾಥ ಕೆ.ವಿ. ಅವರು ಮಾತನಾಡಿ, ಸಂಘದ ಕಾರ್ಯಚಟುವಟಿಕೆ ಶ್ಲಾಘಿಸಿ ತಾಲೂಕಿನಾದ್ಯಂತ ಇನ್ನಷ್ಟು ಒಗ್ಗಟ್ಟು ಮೂಡುವಂತಾಗಲಿ ಎಂದು ಆಶಿಸಿದರು. ಕಟ್ಟಡ ಸಮಿತಿ ಅಧ್ಯಕ್ಷರಾದ ಎಚ್. ಸೋಮಯ್ಯ ಹನೈನಡೆ ಅವರು ಮಾತನಾಡಿ, ಸಂಘದ ನೂತನ
ಕಟಡ ನಿರ್ಮಾಣ ನಮ್ಮೆಲ್ಲರ ಧ್ಯೇಯವಾಗಲಿ, ಈ ನಿಟ್ಟಿನಲ್ಲಿ ಎಲ್ಲಾ ಆಯಾಮಗಳಲ್ಲೂ ಶ್ರಮವಹಿಸಬೇಕಾದ ಅನಿವಾರ್ಯತೆ ಇದೆ ಎಂದರು.
ಸಂಘದ ಕಾರ್ಯಕಾರಿ ಸಮಿತಿಗೆ ಒಟ್ಟು 24 ಮಂದಿಯನ್ನು ಆಯ್ಕೆ ಮಾಡಲಾಯಿತು. ಸಂಘದ ಮಾಜಿ ಅಧ್ಯಕ್ಷರು ಹಿರಿಯರಾದ ಗೋವಿಂದ ಮೂಲ್ಯ, ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಕು| ಸ್ವಾತಿ ಪ್ರಾರ್ಥಿಸಿ, ಸಂಘದ ಉಪಾಧ್ಯಕ್ಷ ಎಚ್. ಪದ್ಮಕುಮಾರ್ ಸ್ವಾಗತಿಸಿದರು. ಕಟ್ಟಡ ಸಮಿತಿ ಕಾರ್ಯದರ್ಶಿ ಶಿಕ್ಷಕ ಜಗನ್ನಾಥ ಕುಲಾಲ್ ನಿರೂಪಿಸಿ, ಸಂಘದ ಕಾರ್ಯದರ್ಶಿ ಯತೀಶ್ ಸಿರಿಮಜಲು ವಂದಿಸಿದರು.

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಂಚ ಗುರಿಪಳ್ಳ ಇವರಿಗೆ ವಾಟರ್ ಬೆಡ್ ಹಸ್ತಾಂತರ

Suddi Udaya

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya

ಅಕ್ರಮ ದಾಸ್ತಾನು ಡಿಸೇಲ್ ಪತ್ತೆ ಪ್ರಕರಣ:ಡಿಸೇಲ್ ಹರಾಜು ಮಾಡಿದ ಕಂದಾಯ ಇಲಾಖೆ

Suddi Udaya

ವೇಣೂರು ನವಚೇತನ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ, ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!