25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ

ಬೆಳ್ತಂಗಡಿ ತಾಲೂಕಿನಲ್ಲಿ ಸಮಾಜ ಸೇವೆ ಮಾಡಬೇಕೆಂಬ ಕನಸು ಹೊತ್ತು ಮಂಗಳೂರಿನ ಉದಯ ಪೂಜಾರಿ ಬಳ್ಳಾಲ್‌ ಬಾಗ್ ಸ್ಥಾಪಕ ಅಧ್ಯಕ್ಷತೆಯ ಬಿರುವೆರ್ ಕುಡ್ಲ ಸಂಘಟನೆಯನ್ನು ಸುವರ್ಣ ಪ್ರತಿಷ್ಠಾನ ಅಧ್ಯಕ್ಷರು ಸಂಪತ್‌ ಬಿ. ಸುವರ್ಣ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕಕ್ಕೆ ಐದು ವರ್ಷಗಳನ್ನು ಪೂರೈಸಿದೆ.

ಫೆಬ್ರವರಿ 13, 2018ರಂದು ಪ್ರಾರಂಭಗೊಂಡ ಈ ಸಂಘ ಇಂದಿಗೆ 48 ಸೇವಾ ಯೋಜನೆ ಪೂರ್ಣ ಗೊಂಡಿದೆ.
ಬೆಳ್ತಂಗಡಿ ಘಟಕದ 49, ಹಾಗೂ 50ನೇ ಸೇವಾ ಯೋಜನೆಯನ್ನು ಬೆಳ್ತಂಗಡಿ ತಾಲೂಕಿನ ಕುಕ್ಕವು ಗ್ರಾಮದ ದಿ. ಲಿಂಗಪ್ಪ ಕುಂಬಾರ ಇವರ ತಂಗಿ ಕುಮಾರಿ ಕಲ್ಯಾಣಿ ಇವರಿಗೆ ನೀಡಿದರು. ಇವರ ಕುಟುಂಬ ದಲ್ಲಿ ಆಧಾರ ಸ್ಥಂಬ
ವಾಗಿದ್ದ ಲಿಂಗಪ್ಪ ಕುಂಬಾರರು ಅಗಲಿದ್ದು, ಕಲ್ಯಾಣಿಯವರು ಒಬ್ಬಂಟಿಯಾಗಿ ಕಷ್ಟದ ಜೀವನ ನಡೆಸುತ್ತಿದ್ದಾರೆ.
ಅಲ್ಲದೇ ಕ್ಯಾನ್ಸರ್ ನಿಂದ ಬಳಲುತ್ತಿರುವ ಬಂಟ್ವಾಳ ತಾಲೂಕಿನ ಬಾಲ್ಯರಾಬೆಟ್ಟು ಇರ್ವತ್ತೂರು ನೈನಾಡು ಮನೆಯ ಗಂಗಾಧರ್ ಈ ಎರಡು ಕುಟುಂಬಕ್ಕೆ ಘಟಕದಿಂದ ಫಲಾನುಭವಿಗಳಿಗೆ ಚೆಕ್ಕ್ ನ್ನು ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜ ಇವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ರಾಜೇಶ್ ಕೋಟ್ಯಾನ್, ಕಾರ್ಯದರ್ಶಿ ಅರುಣ್ ಪೂಜಾರಿ, ಹರೀಶ್ ಕೋಟ್ಯಾನ್ ಮದ್ದಡ್ಕ, ವಿನಯ್ ಗುರಿಪಲ್ಲ, ದಿನೇಶ್ ಕೋಟ್ಯಾನ್, ಸುರೇಶ್ ಪೂಜಾರಿ, ಅನಿಲ್, ಗುರುಪ್ರಸಾದ್ ಉಪಸ್ಥಿತರಿದ್ದರು.

Related posts

ಮಾಲಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಪಟ್ರಮೆ ಗೆಳೆಯರ ಬಳಗದಿಂದ ಗಣೇಶ ಚತುರ್ಥಿ ಪ್ರಯುಕ್ತ ಅನಾರು ಶಾಲೆಯಲ್ಲಿ ಶ್ರಮದಾನ

Suddi Udaya

ಕೊಕ್ಕಡ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಿವರಾಮ ಗೌಡ ಟಿ. ಎಂ. ನಿಧನ

Suddi Udaya

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

Suddi Udaya

ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.1 ಕೋಟಿ ಅನುದಾನ ಮಂಜೂರು :ರಕ್ಷಿತ್ ಶಿವರಾಂ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya
error: Content is protected !!