23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿ

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

ನವದೆಹಲಿಯ ನವ ಶ್ರೀ ಕಲೆ ಮತ್ತು ಸಂಸ್ಕೃತಿ ಸಂಸ್ಥೆ ಇತ್ತೀಚೆಗೆ ನಡೆಸಿದ ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ’ ಶಿಲ್ಪ್ ಆಕಾರ್’ ನಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ವಿಭಾಗದ ಪ್ರಥಮ ಎಂ.ಎಸ್ಸಿ ಅಧ್ಯಯನ ನಡೆಸುತ್ತಿರುವ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ ದೊರೆತಿದೆ.

ಇವರು ಮಂಗಳೂರು ಕಾಳಿಕಾಂಭ ವಿನಾಯಕ ದೇವಸ್ಥಾನದ ಕೆಯ್ಯೂರು ಕೂಡುವಳಿಕೆ ಮೊಕ್ತೇಸರರಾದ ಕೆ ಹರಿಶ್ಚಂದ್ರ ಆಚಾರ್ಯ ಕೋಡಂಬು ಹಾಗೂ ಶುಭ ದಂಪತಿಯ ಪುತ್ರಿಯಗಿದ್ದಾರೆ.

‘ ಶಿಲ್ಪ್ ಆಕಾರ್’ ಕಲೆ ಮತ್ತು ಕರಕುಶಲತೆಗೆ ಸಂಭಂದಿಸಿದ ರಾಷ್ಟ್ರ ಮಟ್ಟದ ಸ್ಪರ್ಧೆಯಾಗಿದೆ . ನವದೆಹಲಿಯ ಆರ್ಟಿಜೆನ್ ಆರ್ಟ್ ಗ್ಯಾಲರಿಯಲ್ಲಿ ನಡೆದ ರಾಷ್ಟ ಮಟ್ಟದ ಡ್ರಾಯಿಂಗ್, ಪೈಂಟಿಂಗ್, ಆರ್ಟ್ ಮತ್ತು ಕ್ರಾಫ್ಟ್’ ಪ್ರದರ್ಶನದಲ್ಲಿ ಇವರ ಕರಕುಶಲತೆಯನ್ನು ಪ್ರದರ್ಶಿಸಲಾಯಿತು.,

‘ಆರ್ಟಿಜೆನ್ ಆರ್ಟ್’ ಗ್ಯಾಲರಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಇವರಿಗೆ ಪ್ರಶಸ್ತಿಯೊಂದಿಗೆ ನಗದು ಬಹುಮಾನವನ್ನು ವಿತರಿಸಲಾಯಿತು.

Related posts

ಬೆಳ್ತಂಗಡಿ: ಭಗವಾನ್ ಶ್ರೀ ಸತ್ಯಸಾಯಿ ಬಾಬಾರವರ 100ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀರಾಘವೇಂದ್ರ ಮಠದ ಸುಂದರ ಪರಿಸರದಲ್ಲಿ “ಪ್ರೇಮ ತರು” ಸಸಿಗಳನ್ನು ನೆಡುವ ಕಾರ್ಯಕ್ರಮ

Suddi Udaya

ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್ : ಇತಿಹಾಸ ಸೃಷ್ಟಿಸಿದ ಭಾರತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!