July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ


ಅಳದಂಗಡಿ ವಲಯ ವ್ಯಾಪ್ತಿಯ ನಾವರ ಗ್ರಾಮದ ಉಂಬುಜೆ ಎಂಬಲ್ಲಿ ಕೊರಗಪ್ಪ ಮಲೆಕುಡಿಯ ದಂಪತಿಯ ಮನೆಯ ಮೇಲ್ಚಾವಣಿಯು ತೀರ ದುಸ್ಥಿತಿಯಲ್ಲಿದ್ದು. ಯಾವುದೇ ಸಮಯದಲ್ಲಿ ಬಿದ್ದು ಹೋಗುವ ಪರಿಸ್ಥಿತಿಯಲ್ಲಿತ್ತು. ದಂಪತಿಗಳಿಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದು ಸ್ವತಂತ್ರವಾಗಿ ಯಾವುದೇ ಕೆಲಸಗಳನ್ನು ನೆರವೇರಿಸುವಲ್ಲಿ ಅಸಹಾಯಕರಾಗಿದ್ದರು. ದಂಪತಿಗಳಿಬ್ಬರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಪಕ್ಕದ ಮನೆಯವರು ಕಳುಹಿಸಿದ್ದು ಮನೆ ಖಾಲಿ ಆಗಿತ್ತು. ಇದೇ ಸಂದರ್ಭದಲ್ಲಿ ಮನೆಯ ದುರಸ್ತಿ ಕಾರ್ಯ ಮಾಡುವುದು ಒಳಿತೆಂದು ಮನಗಂಡು ವೃದ್ಧರ ಆರೈಕೆಯನ್ನು ಮಾಡುತ್ತಿದ್ದ ಅವರ ಸಹೋದರ ಸಂಬಂಧಿಗಳು. ಮನೆಯ ಛಾವಣಿ ತೆರವುಗೊಳಿಸುವಲ್ಲಿ ವಿಪತ್ತು ನಿರ್ವಹಣಾ ಸ್ವಯಂ ಸೇವಕರ ನೆರವನ್ನು ಕೋರಿ ಮನವಿಯನ್ನು ಸಲ್ಲಿಸಿದ್ದರು.
ವಿಷಯವನ್ನು ವಲಯ ಮೇಲ್ವಿಚಾರಕರು ಹಾಗೂ ಯೋಜನಾಧಿಕಾರಿಗಳ ಗಮನಕ್ಕೆ ತಂದು ಮೇಲ್ಚಾವಣಿಯ ತೆರವು ಕಾರ್ಯವನ್ನು ನಿರ್ವಹಿಸಿದರು.

ಈ ಸಂದರ್ಭದಲ್ಲಿ ಘಟಕ ಪ್ರತಿನಿಧಿ ರಾಜೇಶ್ ಹಾಗೂ ಶ್ರೀಮತಿ ಶಕುಂತಲಾ, ಸ್ವಯಂ ಸೇವಕರಾದ ಪ್ರಕಾಶ್ ಕೊಲ್ಲಂಗೆ, ಶಿವಾನಂದ, ಶ್ರೀಕಾಂತ್, ಸರಸ್ವತಿ, ಹೇಮಾವತಿ, ಅಮಿತಾ ಹಾಗೂ ನಳಿನಿ ಸ್ವಯಂಸೇವಕರು ಭಾಗವಹಿಸಿದರು.

ಸ್ವಯಂ ಸೇವಕರೊಂದಿಗೆ ಈ ಕಾರ್ಯದಲ್ಲಿ ಸೋದರ ಸಂಬಂಧಿಗಳು ಸಹಕರಿಸಿದರು. ಸೇವಾ ಪ್ರತಿನಿಧಿ ಕುಮಾರಿ ಸುಲೋಚನಾರವರು ಸ್ಥಳದಲ್ಲಿ ಉಪಸ್ಥಿತರಿದ್ದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ,ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೆಂಪೇಗೌಡ ಜಯಂತಿ ಆಚರಣೆ, ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಮುಂಡಾಜೆ ಪ್ರೌಢಶಾಲೆಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

Suddi Udaya

ಮಳೆ ಹಿನ್ನಲೆ-ನಾಳೆ (ಜು. 8)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya
error: Content is protected !!