23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ


ಅಳದಂಗಡಿ ವಲಯ ವ್ಯಾಪ್ತಿಯ ನಾವರ ಗ್ರಾಮದ ಉಂಬುಜೆ ಎಂಬಲ್ಲಿ ಕೊರಗಪ್ಪ ಮಲೆಕುಡಿಯ ದಂಪತಿಯ ಮನೆಯ ಮೇಲ್ಚಾವಣಿಯು ತೀರ ದುಸ್ಥಿತಿಯಲ್ಲಿದ್ದು. ಯಾವುದೇ ಸಮಯದಲ್ಲಿ ಬಿದ್ದು ಹೋಗುವ ಪರಿಸ್ಥಿತಿಯಲ್ಲಿತ್ತು. ದಂಪತಿಗಳಿಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದು ಸ್ವತಂತ್ರವಾಗಿ ಯಾವುದೇ ಕೆಲಸಗಳನ್ನು ನೆರವೇರಿಸುವಲ್ಲಿ ಅಸಹಾಯಕರಾಗಿದ್ದರು. ದಂಪತಿಗಳಿಬ್ಬರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಪಕ್ಕದ ಮನೆಯವರು ಕಳುಹಿಸಿದ್ದು ಮನೆ ಖಾಲಿ ಆಗಿತ್ತು. ಇದೇ ಸಂದರ್ಭದಲ್ಲಿ ಮನೆಯ ದುರಸ್ತಿ ಕಾರ್ಯ ಮಾಡುವುದು ಒಳಿತೆಂದು ಮನಗಂಡು ವೃದ್ಧರ ಆರೈಕೆಯನ್ನು ಮಾಡುತ್ತಿದ್ದ ಅವರ ಸಹೋದರ ಸಂಬಂಧಿಗಳು. ಮನೆಯ ಛಾವಣಿ ತೆರವುಗೊಳಿಸುವಲ್ಲಿ ವಿಪತ್ತು ನಿರ್ವಹಣಾ ಸ್ವಯಂ ಸೇವಕರ ನೆರವನ್ನು ಕೋರಿ ಮನವಿಯನ್ನು ಸಲ್ಲಿಸಿದ್ದರು.
ವಿಷಯವನ್ನು ವಲಯ ಮೇಲ್ವಿಚಾರಕರು ಹಾಗೂ ಯೋಜನಾಧಿಕಾರಿಗಳ ಗಮನಕ್ಕೆ ತಂದು ಮೇಲ್ಚಾವಣಿಯ ತೆರವು ಕಾರ್ಯವನ್ನು ನಿರ್ವಹಿಸಿದರು.

ಈ ಸಂದರ್ಭದಲ್ಲಿ ಘಟಕ ಪ್ರತಿನಿಧಿ ರಾಜೇಶ್ ಹಾಗೂ ಶ್ರೀಮತಿ ಶಕುಂತಲಾ, ಸ್ವಯಂ ಸೇವಕರಾದ ಪ್ರಕಾಶ್ ಕೊಲ್ಲಂಗೆ, ಶಿವಾನಂದ, ಶ್ರೀಕಾಂತ್, ಸರಸ್ವತಿ, ಹೇಮಾವತಿ, ಅಮಿತಾ ಹಾಗೂ ನಳಿನಿ ಸ್ವಯಂಸೇವಕರು ಭಾಗವಹಿಸಿದರು.

ಸ್ವಯಂ ಸೇವಕರೊಂದಿಗೆ ಈ ಕಾರ್ಯದಲ್ಲಿ ಸೋದರ ಸಂಬಂಧಿಗಳು ಸಹಕರಿಸಿದರು. ಸೇವಾ ಪ್ರತಿನಿಧಿ ಕುಮಾರಿ ಸುಲೋಚನಾರವರು ಸ್ಥಳದಲ್ಲಿ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

Suddi Udaya

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya

ಎಸ್.ಡಿ.ಎಂ. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಉಜಿರೆ ಗ್ರಾಮ ಪಂಚಾಯತ್‌ಗೆ ಶೈಕ್ಷಣಿಕ ಅಧ್ಯಯನ ಭೇಟಿ

Suddi Udaya

ಹಿಂದೂ ಧರ್ಮದ ವಿರುದ್ಧ ನೀಡಿರುವ ಹೇಳಿಕೆಗೆ ದ.ಕ. ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಂಘ ಮತ್ತು ಸಮಗ್ರ ಹಿಂದೂ ಸಮಾಜ ಖಂಡನೆ: ಡಾ| ಎಂ.ಎಂ. ದಯಾಕರ್

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಉಜಿರೆ ಚಿದಾನಂದ ಗೌಡ ನಿಧನ

Suddi Udaya
error: Content is protected !!