24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಜು. 31 ರಂದು ಬೆಳ್ತಂಗಡಿ ಬಿಎಂಎಸ್ ಕಾರ್ಯಾಲಯದಲ್ಲಿ ಬಿಎಂಎಸ್ ಸ್ಥಾಪನೆ ದಿನಾಚರಣೆ ಕಾರ್ಯಕ್ರಮ ಜರುಗಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಎಂಎಸ್ ತಾಲೂಕು ಸಮಿತಿಯ ಅಧ್ಯಕ್ಷರಾದ ಉದಯ್ ಬಿಕೆ ಬಂದಾರು ಇವರ ಅಧ್ಯಕ್ಷತೆ ವಹಿಸಿಕೊಂಡಿದ್ದರು.

ಸ್ಥಾಪನಾ ದಿನಾಚರಣೆಯ ಬಗ್ಗೆ ಬಿಎಂಎಸ್ ಜಿಲ್ಲೆಯ ಅಧ್ಯಕ್ಷ ಅನಿಲ್ ಕುಮಾರ್ ಯು ಮಾತನಾಡಿ ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ಕಾರ್ಮಿಕ ಬಂಧುಗಳು ಕೈಜೋಡಿಸಿ ಎಂದು ಮನವಿ ಮಾಡಿದರು.

ತಾಲೂಕು ಸೇವಾ ಪ್ರಮುಖವಾದ ವಿಜಯ್ ಅರಳಿ ಸ್ಥಾಪನೆ ದಿನಾಚರಣೆಯ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ತಾಲೂಕು ಬೀಡಿ ಮಜ್ದೂರ್ ಸಂಘದ ಸಹ ಸಂಚಾಲಕರಾದ ಶಶಿಕಲಾ ಕೊಯ್ಯೂರು , ತಾಲೂಕು ರಿಕ್ಷಾ ಯೂನಿಯನ್ ನ ಪ್ರಮುಖರು, ತಾಲೂಕಿನ ಬಿಎಂಎಸ್ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಮಿಕ ಬಂಧುಗಳು ಉಪಸ್ಥಿತರಿದ್ದರು.

ತಾಲೂಕು ಸಂಯೋಜಕರಾದ ಶಾಂತಪ್ಪ ಕಾರ್ಯಕ್ರಮ ನಿರೂಪಿಸಿ , ಸ್ವಾಗತಿಸಿದರು. ಬಿಎಂಎಸ್‌ ಕಟ್ಟಡ ಕಾರ್ಮಿಕ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರನಾಥ ಕಲ್ಮಂಜ ಧನ್ಯವಾದವಿತ್ತರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಯಾತ್ರಿ ನಿವಾಸ: ನ. 23 ರಂದು ಯಾತ್ರಿ ನಿವಾಸದ ಶಿಲಾನ್ಯಾಸ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ: ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya
error: Content is protected !!