39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ


ಅಳದಂಗಡಿ ವಲಯ ವ್ಯಾಪ್ತಿಯ ನಾವರ ಗ್ರಾಮದ ಉಂಬುಜೆ ಎಂಬಲ್ಲಿ ಕೊರಗಪ್ಪ ಮಲೆಕುಡಿಯ ದಂಪತಿಯ ಮನೆಯ ಮೇಲ್ಚಾವಣಿಯು ತೀರ ದುಸ್ಥಿತಿಯಲ್ಲಿದ್ದು. ಯಾವುದೇ ಸಮಯದಲ್ಲಿ ಬಿದ್ದು ಹೋಗುವ ಪರಿಸ್ಥಿತಿಯಲ್ಲಿತ್ತು. ದಂಪತಿಗಳಿಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದು ಸ್ವತಂತ್ರವಾಗಿ ಯಾವುದೇ ಕೆಲಸಗಳನ್ನು ನೆರವೇರಿಸುವಲ್ಲಿ ಅಸಹಾಯಕರಾಗಿದ್ದರು. ದಂಪತಿಗಳಿಬ್ಬರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಪಕ್ಕದ ಮನೆಯವರು ಕಳುಹಿಸಿದ್ದು ಮನೆ ಖಾಲಿ ಆಗಿತ್ತು. ಇದೇ ಸಂದರ್ಭದಲ್ಲಿ ಮನೆಯ ದುರಸ್ತಿ ಕಾರ್ಯ ಮಾಡುವುದು ಒಳಿತೆಂದು ಮನಗಂಡು ವೃದ್ಧರ ಆರೈಕೆಯನ್ನು ಮಾಡುತ್ತಿದ್ದ ಅವರ ಸಹೋದರ ಸಂಬಂಧಿಗಳು. ಮನೆಯ ಛಾವಣಿ ತೆರವುಗೊಳಿಸುವಲ್ಲಿ ವಿಪತ್ತು ನಿರ್ವಹಣಾ ಸ್ವಯಂ ಸೇವಕರ ನೆರವನ್ನು ಕೋರಿ ಮನವಿಯನ್ನು ಸಲ್ಲಿಸಿದ್ದರು.
ವಿಷಯವನ್ನು ವಲಯ ಮೇಲ್ವಿಚಾರಕರು ಹಾಗೂ ಯೋಜನಾಧಿಕಾರಿಗಳ ಗಮನಕ್ಕೆ ತಂದು ಮೇಲ್ಚಾವಣಿಯ ತೆರವು ಕಾರ್ಯವನ್ನು ನಿರ್ವಹಿಸಿದರು.

ಈ ಸಂದರ್ಭದಲ್ಲಿ ಘಟಕ ಪ್ರತಿನಿಧಿ ರಾಜೇಶ್ ಹಾಗೂ ಶ್ರೀಮತಿ ಶಕುಂತಲಾ, ಸ್ವಯಂ ಸೇವಕರಾದ ಪ್ರಕಾಶ್ ಕೊಲ್ಲಂಗೆ, ಶಿವಾನಂದ, ಶ್ರೀಕಾಂತ್, ಸರಸ್ವತಿ, ಹೇಮಾವತಿ, ಅಮಿತಾ ಹಾಗೂ ನಳಿನಿ ಸ್ವಯಂಸೇವಕರು ಭಾಗವಹಿಸಿದರು.

ಸ್ವಯಂ ಸೇವಕರೊಂದಿಗೆ ಈ ಕಾರ್ಯದಲ್ಲಿ ಸೋದರ ಸಂಬಂಧಿಗಳು ಸಹಕರಿಸಿದರು. ಸೇವಾ ಪ್ರತಿನಿಧಿ ಕುಮಾರಿ ಸುಲೋಚನಾರವರು ಸ್ಥಳದಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ

Suddi Udaya

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ

Suddi Udaya
error: Content is protected !!