September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ


ಅಳದಂಗಡಿ ವಲಯ ವ್ಯಾಪ್ತಿಯ ನಾವರ ಗ್ರಾಮದ ಉಂಬುಜೆ ಎಂಬಲ್ಲಿ ಕೊರಗಪ್ಪ ಮಲೆಕುಡಿಯ ದಂಪತಿಯ ಮನೆಯ ಮೇಲ್ಚಾವಣಿಯು ತೀರ ದುಸ್ಥಿತಿಯಲ್ಲಿದ್ದು. ಯಾವುದೇ ಸಮಯದಲ್ಲಿ ಬಿದ್ದು ಹೋಗುವ ಪರಿಸ್ಥಿತಿಯಲ್ಲಿತ್ತು. ದಂಪತಿಗಳಿಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದು ಸ್ವತಂತ್ರವಾಗಿ ಯಾವುದೇ ಕೆಲಸಗಳನ್ನು ನೆರವೇರಿಸುವಲ್ಲಿ ಅಸಹಾಯಕರಾಗಿದ್ದರು. ದಂಪತಿಗಳಿಬ್ಬರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಪಕ್ಕದ ಮನೆಯವರು ಕಳುಹಿಸಿದ್ದು ಮನೆ ಖಾಲಿ ಆಗಿತ್ತು. ಇದೇ ಸಂದರ್ಭದಲ್ಲಿ ಮನೆಯ ದುರಸ್ತಿ ಕಾರ್ಯ ಮಾಡುವುದು ಒಳಿತೆಂದು ಮನಗಂಡು ವೃದ್ಧರ ಆರೈಕೆಯನ್ನು ಮಾಡುತ್ತಿದ್ದ ಅವರ ಸಹೋದರ ಸಂಬಂಧಿಗಳು. ಮನೆಯ ಛಾವಣಿ ತೆರವುಗೊಳಿಸುವಲ್ಲಿ ವಿಪತ್ತು ನಿರ್ವಹಣಾ ಸ್ವಯಂ ಸೇವಕರ ನೆರವನ್ನು ಕೋರಿ ಮನವಿಯನ್ನು ಸಲ್ಲಿಸಿದ್ದರು.
ವಿಷಯವನ್ನು ವಲಯ ಮೇಲ್ವಿಚಾರಕರು ಹಾಗೂ ಯೋಜನಾಧಿಕಾರಿಗಳ ಗಮನಕ್ಕೆ ತಂದು ಮೇಲ್ಚಾವಣಿಯ ತೆರವು ಕಾರ್ಯವನ್ನು ನಿರ್ವಹಿಸಿದರು.

ಈ ಸಂದರ್ಭದಲ್ಲಿ ಘಟಕ ಪ್ರತಿನಿಧಿ ರಾಜೇಶ್ ಹಾಗೂ ಶ್ರೀಮತಿ ಶಕುಂತಲಾ, ಸ್ವಯಂ ಸೇವಕರಾದ ಪ್ರಕಾಶ್ ಕೊಲ್ಲಂಗೆ, ಶಿವಾನಂದ, ಶ್ರೀಕಾಂತ್, ಸರಸ್ವತಿ, ಹೇಮಾವತಿ, ಅಮಿತಾ ಹಾಗೂ ನಳಿನಿ ಸ್ವಯಂಸೇವಕರು ಭಾಗವಹಿಸಿದರು.

ಸ್ವಯಂ ಸೇವಕರೊಂದಿಗೆ ಈ ಕಾರ್ಯದಲ್ಲಿ ಸೋದರ ಸಂಬಂಧಿಗಳು ಸಹಕರಿಸಿದರು. ಸೇವಾ ಪ್ರತಿನಿಧಿ ಕುಮಾರಿ ಸುಲೋಚನಾರವರು ಸ್ಥಳದಲ್ಲಿ ಉಪಸ್ಥಿತರಿದ್ದರು.

Related posts

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ನಾಳೆ (ಜು.28) ಕುಲಾಲ ಮಂದಿರದಲ್ಲಿನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸೇವೆಗೆ ಉದಾರ ಹಸ್ತ: ವಾಣಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ರೂ.5 ಲಕ್ಷ ಕೊಡುಗೆ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya

ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಡಾ. ಪ್ರಸನ್ನ ಹೆಬ್ಬಾರ್ ಭೇಟಿ

Suddi Udaya
error: Content is protected !!