23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ


ಅಳದಂಗಡಿ ವಲಯ ವ್ಯಾಪ್ತಿಯ ನಾವರ ಗ್ರಾಮದ ಉಂಬುಜೆ ಎಂಬಲ್ಲಿ ಕೊರಗಪ್ಪ ಮಲೆಕುಡಿಯ ದಂಪತಿಯ ಮನೆಯ ಮೇಲ್ಚಾವಣಿಯು ತೀರ ದುಸ್ಥಿತಿಯಲ್ಲಿದ್ದು. ಯಾವುದೇ ಸಮಯದಲ್ಲಿ ಬಿದ್ದು ಹೋಗುವ ಪರಿಸ್ಥಿತಿಯಲ್ಲಿತ್ತು. ದಂಪತಿಗಳಿಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದು ಸ್ವತಂತ್ರವಾಗಿ ಯಾವುದೇ ಕೆಲಸಗಳನ್ನು ನೆರವೇರಿಸುವಲ್ಲಿ ಅಸಹಾಯಕರಾಗಿದ್ದರು. ದಂಪತಿಗಳಿಬ್ಬರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಪಕ್ಕದ ಮನೆಯವರು ಕಳುಹಿಸಿದ್ದು ಮನೆ ಖಾಲಿ ಆಗಿತ್ತು. ಇದೇ ಸಂದರ್ಭದಲ್ಲಿ ಮನೆಯ ದುರಸ್ತಿ ಕಾರ್ಯ ಮಾಡುವುದು ಒಳಿತೆಂದು ಮನಗಂಡು ವೃದ್ಧರ ಆರೈಕೆಯನ್ನು ಮಾಡುತ್ತಿದ್ದ ಅವರ ಸಹೋದರ ಸಂಬಂಧಿಗಳು. ಮನೆಯ ಛಾವಣಿ ತೆರವುಗೊಳಿಸುವಲ್ಲಿ ವಿಪತ್ತು ನಿರ್ವಹಣಾ ಸ್ವಯಂ ಸೇವಕರ ನೆರವನ್ನು ಕೋರಿ ಮನವಿಯನ್ನು ಸಲ್ಲಿಸಿದ್ದರು.
ವಿಷಯವನ್ನು ವಲಯ ಮೇಲ್ವಿಚಾರಕರು ಹಾಗೂ ಯೋಜನಾಧಿಕಾರಿಗಳ ಗಮನಕ್ಕೆ ತಂದು ಮೇಲ್ಚಾವಣಿಯ ತೆರವು ಕಾರ್ಯವನ್ನು ನಿರ್ವಹಿಸಿದರು.

ಈ ಸಂದರ್ಭದಲ್ಲಿ ಘಟಕ ಪ್ರತಿನಿಧಿ ರಾಜೇಶ್ ಹಾಗೂ ಶ್ರೀಮತಿ ಶಕುಂತಲಾ, ಸ್ವಯಂ ಸೇವಕರಾದ ಪ್ರಕಾಶ್ ಕೊಲ್ಲಂಗೆ, ಶಿವಾನಂದ, ಶ್ರೀಕಾಂತ್, ಸರಸ್ವತಿ, ಹೇಮಾವತಿ, ಅಮಿತಾ ಹಾಗೂ ನಳಿನಿ ಸ್ವಯಂಸೇವಕರು ಭಾಗವಹಿಸಿದರು.

ಸ್ವಯಂ ಸೇವಕರೊಂದಿಗೆ ಈ ಕಾರ್ಯದಲ್ಲಿ ಸೋದರ ಸಂಬಂಧಿಗಳು ಸಹಕರಿಸಿದರು. ಸೇವಾ ಪ್ರತಿನಿಧಿ ಕುಮಾರಿ ಸುಲೋಚನಾರವರು ಸ್ಥಳದಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಭೀಕರ ಗಾಳಿ ಮಳೆ: ಕುವೆಟ್ಟು ವರಕಬೆ ಬಳಿ ರಸ್ತೆಗೆ ಬಿದ್ದ ಮರ: ಸಂಚಾರಕ್ಕೆ ಅಡಚಣೆ

Suddi Udaya

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

Suddi Udaya
error: Content is protected !!