22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ


ಅಳದಂಗಡಿ ವಲಯ ವ್ಯಾಪ್ತಿಯ ನಾವರ ಗ್ರಾಮದ ಉಂಬುಜೆ ಎಂಬಲ್ಲಿ ಕೊರಗಪ್ಪ ಮಲೆಕುಡಿಯ ದಂಪತಿಯ ಮನೆಯ ಮೇಲ್ಚಾವಣಿಯು ತೀರ ದುಸ್ಥಿತಿಯಲ್ಲಿದ್ದು. ಯಾವುದೇ ಸಮಯದಲ್ಲಿ ಬಿದ್ದು ಹೋಗುವ ಪರಿಸ್ಥಿತಿಯಲ್ಲಿತ್ತು. ದಂಪತಿಗಳಿಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದು ಸ್ವತಂತ್ರವಾಗಿ ಯಾವುದೇ ಕೆಲಸಗಳನ್ನು ನೆರವೇರಿಸುವಲ್ಲಿ ಅಸಹಾಯಕರಾಗಿದ್ದರು. ದಂಪತಿಗಳಿಬ್ಬರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಪಕ್ಕದ ಮನೆಯವರು ಕಳುಹಿಸಿದ್ದು ಮನೆ ಖಾಲಿ ಆಗಿತ್ತು. ಇದೇ ಸಂದರ್ಭದಲ್ಲಿ ಮನೆಯ ದುರಸ್ತಿ ಕಾರ್ಯ ಮಾಡುವುದು ಒಳಿತೆಂದು ಮನಗಂಡು ವೃದ್ಧರ ಆರೈಕೆಯನ್ನು ಮಾಡುತ್ತಿದ್ದ ಅವರ ಸಹೋದರ ಸಂಬಂಧಿಗಳು. ಮನೆಯ ಛಾವಣಿ ತೆರವುಗೊಳಿಸುವಲ್ಲಿ ವಿಪತ್ತು ನಿರ್ವಹಣಾ ಸ್ವಯಂ ಸೇವಕರ ನೆರವನ್ನು ಕೋರಿ ಮನವಿಯನ್ನು ಸಲ್ಲಿಸಿದ್ದರು.
ವಿಷಯವನ್ನು ವಲಯ ಮೇಲ್ವಿಚಾರಕರು ಹಾಗೂ ಯೋಜನಾಧಿಕಾರಿಗಳ ಗಮನಕ್ಕೆ ತಂದು ಮೇಲ್ಚಾವಣಿಯ ತೆರವು ಕಾರ್ಯವನ್ನು ನಿರ್ವಹಿಸಿದರು.

ಈ ಸಂದರ್ಭದಲ್ಲಿ ಘಟಕ ಪ್ರತಿನಿಧಿ ರಾಜೇಶ್ ಹಾಗೂ ಶ್ರೀಮತಿ ಶಕುಂತಲಾ, ಸ್ವಯಂ ಸೇವಕರಾದ ಪ್ರಕಾಶ್ ಕೊಲ್ಲಂಗೆ, ಶಿವಾನಂದ, ಶ್ರೀಕಾಂತ್, ಸರಸ್ವತಿ, ಹೇಮಾವತಿ, ಅಮಿತಾ ಹಾಗೂ ನಳಿನಿ ಸ್ವಯಂಸೇವಕರು ಭಾಗವಹಿಸಿದರು.

ಸ್ವಯಂ ಸೇವಕರೊಂದಿಗೆ ಈ ಕಾರ್ಯದಲ್ಲಿ ಸೋದರ ಸಂಬಂಧಿಗಳು ಸಹಕರಿಸಿದರು. ಸೇವಾ ಪ್ರತಿನಿಧಿ ಕುಮಾರಿ ಸುಲೋಚನಾರವರು ಸ್ಥಳದಲ್ಲಿ ಉಪಸ್ಥಿತರಿದ್ದರು.

Related posts

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ನಿಂದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಕಂಬಳದ ನಂದಳಿಕೆಯ ಪಾಂಡು ಕೋಣಕ್ಕೆ ಗೌರವಾರ್ಪಣೆ

Suddi Udaya

ರೂ.23 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿರುವ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಶಿಲಾನ್ಯಾಸ

Suddi Udaya

ಎಲ್. ಸಿ. ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!