ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷರಾಗಿ ಜನಾರ್ದನ ಗೌಡ ಕೆ, ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ

Suddi Udaya

ಕಳಿಯ : ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ 5 ವರ್ಷದ ಅವಧಿಗೆ ಜು. 22ರಂದು ಚುನಾವಣೆ ನಿಗಾಧಿಯಾಗಿದ್ದು ಒಟ್ಟು ಎಲ್ಲಾ 13 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದೆ.

ಆಗಸ್ಟ್ 1 ರಂದು ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ಜನಾರ್ದನ ಗೌಡ. ಕೆ. ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನಿರ್ದೇಶಕರಾಗಿ ಕುಶಾಲವತಿ, ಪ್ರವೀಣ್ ಪೂಜಾರಿ, ಗಿರಿಯಪ್ಪ ಗೌಡ, ಕೇಶವ ಪೂಜಾರಿ, ರಂಜನ್ ಎಚ್, ನೇವಿಲ್ ಸ್ಟಿವನ್ ಮೋರಸ್, ವಸಂತ ನಾಯ್ಕ್, ರೇಖಾ ರುಕ್ಮಯ್ಯ, ಯೋಗಿನಿ, ಗಂಗಯ್ಯ ಗೌಡ, ಮೋಹನ್ ದಾಸ್ ಶೆಟ್ಟಿ ಹರ್ಮಾಡಿ ಮುಂತಾದವರು ಆಯ್ಕೆಯಾದರು.

Leave a Comment

error: Content is protected !!