24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಜು. 31 ರಂದು ಬೆಳ್ತಂಗಡಿ ಬಿಎಂಎಸ್ ಕಾರ್ಯಾಲಯದಲ್ಲಿ ಬಿಎಂಎಸ್ ಸ್ಥಾಪನೆ ದಿನಾಚರಣೆ ಕಾರ್ಯಕ್ರಮ ಜರುಗಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಎಂಎಸ್ ತಾಲೂಕು ಸಮಿತಿಯ ಅಧ್ಯಕ್ಷರಾದ ಉದಯ್ ಬಿಕೆ ಬಂದಾರು ಇವರ ಅಧ್ಯಕ್ಷತೆ ವಹಿಸಿಕೊಂಡಿದ್ದರು.

ಸ್ಥಾಪನಾ ದಿನಾಚರಣೆಯ ಬಗ್ಗೆ ಬಿಎಂಎಸ್ ಜಿಲ್ಲೆಯ ಅಧ್ಯಕ್ಷ ಅನಿಲ್ ಕುಮಾರ್ ಯು ಮಾತನಾಡಿ ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ಕಾರ್ಮಿಕ ಬಂಧುಗಳು ಕೈಜೋಡಿಸಿ ಎಂದು ಮನವಿ ಮಾಡಿದರು.

ತಾಲೂಕು ಸೇವಾ ಪ್ರಮುಖವಾದ ವಿಜಯ್ ಅರಳಿ ಸ್ಥಾಪನೆ ದಿನಾಚರಣೆಯ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ತಾಲೂಕು ಬೀಡಿ ಮಜ್ದೂರ್ ಸಂಘದ ಸಹ ಸಂಚಾಲಕರಾದ ಶಶಿಕಲಾ ಕೊಯ್ಯೂರು , ತಾಲೂಕು ರಿಕ್ಷಾ ಯೂನಿಯನ್ ನ ಪ್ರಮುಖರು, ತಾಲೂಕಿನ ಬಿಎಂಎಸ್ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಮಿಕ ಬಂಧುಗಳು ಉಪಸ್ಥಿತರಿದ್ದರು.

ತಾಲೂಕು ಸಂಯೋಜಕರಾದ ಶಾಂತಪ್ಪ ಕಾರ್ಯಕ್ರಮ ನಿರೂಪಿಸಿ , ಸ್ವಾಗತಿಸಿದರು. ಬಿಎಂಎಸ್‌ ಕಟ್ಟಡ ಕಾರ್ಮಿಕ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರನಾಥ ಕಲ್ಮಂಜ ಧನ್ಯವಾದವಿತ್ತರು.

Related posts

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ

Suddi Udaya

ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್‌ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್‍ಸ್ ಶುಭಾರಂಭ

Suddi Udaya

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಕುಮಾರ್ ಹೆಗ್ಡೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!