September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಜು. 31 ರಂದು ಬೆಳ್ತಂಗಡಿ ಬಿಎಂಎಸ್ ಕಾರ್ಯಾಲಯದಲ್ಲಿ ಬಿಎಂಎಸ್ ಸ್ಥಾಪನೆ ದಿನಾಚರಣೆ ಕಾರ್ಯಕ್ರಮ ಜರುಗಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಎಂಎಸ್ ತಾಲೂಕು ಸಮಿತಿಯ ಅಧ್ಯಕ್ಷರಾದ ಉದಯ್ ಬಿಕೆ ಬಂದಾರು ಇವರ ಅಧ್ಯಕ್ಷತೆ ವಹಿಸಿಕೊಂಡಿದ್ದರು.

ಸ್ಥಾಪನಾ ದಿನಾಚರಣೆಯ ಬಗ್ಗೆ ಬಿಎಂಎಸ್ ಜಿಲ್ಲೆಯ ಅಧ್ಯಕ್ಷ ಅನಿಲ್ ಕುಮಾರ್ ಯು ಮಾತನಾಡಿ ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ಕಾರ್ಮಿಕ ಬಂಧುಗಳು ಕೈಜೋಡಿಸಿ ಎಂದು ಮನವಿ ಮಾಡಿದರು.

ತಾಲೂಕು ಸೇವಾ ಪ್ರಮುಖವಾದ ವಿಜಯ್ ಅರಳಿ ಸ್ಥಾಪನೆ ದಿನಾಚರಣೆಯ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ತಾಲೂಕು ಬೀಡಿ ಮಜ್ದೂರ್ ಸಂಘದ ಸಹ ಸಂಚಾಲಕರಾದ ಶಶಿಕಲಾ ಕೊಯ್ಯೂರು , ತಾಲೂಕು ರಿಕ್ಷಾ ಯೂನಿಯನ್ ನ ಪ್ರಮುಖರು, ತಾಲೂಕಿನ ಬಿಎಂಎಸ್ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಮಿಕ ಬಂಧುಗಳು ಉಪಸ್ಥಿತರಿದ್ದರು.

ತಾಲೂಕು ಸಂಯೋಜಕರಾದ ಶಾಂತಪ್ಪ ಕಾರ್ಯಕ್ರಮ ನಿರೂಪಿಸಿ , ಸ್ವಾಗತಿಸಿದರು. ಬಿಎಂಎಸ್‌ ಕಟ್ಟಡ ಕಾರ್ಮಿಕ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರನಾಥ ಕಲ್ಮಂಜ ಧನ್ಯವಾದವಿತ್ತರು.

Related posts

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ‘ಆಟಿದ ಐತ್ತಾರ’ ಮತ್ತು ಮಾಸಿಕ ಸಭೆ

Suddi Udaya

ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ

Suddi Udaya

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya
error: Content is protected !!