22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಜು. 31 ರಂದು ಬೆಳ್ತಂಗಡಿ ಬಿಎಂಎಸ್ ಕಾರ್ಯಾಲಯದಲ್ಲಿ ಬಿಎಂಎಸ್ ಸ್ಥಾಪನೆ ದಿನಾಚರಣೆ ಕಾರ್ಯಕ್ರಮ ಜರುಗಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಎಂಎಸ್ ತಾಲೂಕು ಸಮಿತಿಯ ಅಧ್ಯಕ್ಷರಾದ ಉದಯ್ ಬಿಕೆ ಬಂದಾರು ಇವರ ಅಧ್ಯಕ್ಷತೆ ವಹಿಸಿಕೊಂಡಿದ್ದರು.

ಸ್ಥಾಪನಾ ದಿನಾಚರಣೆಯ ಬಗ್ಗೆ ಬಿಎಂಎಸ್ ಜಿಲ್ಲೆಯ ಅಧ್ಯಕ್ಷ ಅನಿಲ್ ಕುಮಾರ್ ಯು ಮಾತನಾಡಿ ರಾಷ್ಟ್ರ ಕಟ್ಟುವ ಕಾರ್ಯದಲ್ಲಿ ಕಾರ್ಮಿಕ ಬಂಧುಗಳು ಕೈಜೋಡಿಸಿ ಎಂದು ಮನವಿ ಮಾಡಿದರು.

ತಾಲೂಕು ಸೇವಾ ಪ್ರಮುಖವಾದ ವಿಜಯ್ ಅರಳಿ ಸ್ಥಾಪನೆ ದಿನಾಚರಣೆಯ ಶುಭಾಶಯ ಕೋರಿದರು.

ಈ ಸಂದರ್ಭದಲ್ಲಿ ತಾಲೂಕು ಬೀಡಿ ಮಜ್ದೂರ್ ಸಂಘದ ಸಹ ಸಂಚಾಲಕರಾದ ಶಶಿಕಲಾ ಕೊಯ್ಯೂರು , ತಾಲೂಕು ರಿಕ್ಷಾ ಯೂನಿಯನ್ ನ ಪ್ರಮುಖರು, ತಾಲೂಕಿನ ಬಿಎಂಎಸ್ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಮಿಕ ಬಂಧುಗಳು ಉಪಸ್ಥಿತರಿದ್ದರು.

ತಾಲೂಕು ಸಂಯೋಜಕರಾದ ಶಾಂತಪ್ಪ ಕಾರ್ಯಕ್ರಮ ನಿರೂಪಿಸಿ , ಸ್ವಾಗತಿಸಿದರು. ಬಿಎಂಎಸ್‌ ಕಟ್ಟಡ ಕಾರ್ಮಿಕ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರನಾಥ ಕಲ್ಮಂಜ ಧನ್ಯವಾದವಿತ್ತರು.

Related posts

ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಗೇರುಕಟ್ಟೆ: ಕಾರು-ಬೈಕ್ ಡಿಕ್ಕಿ, ಬೈಕ್ ಸವಾರನಿಗೆ ಗಾಯ

Suddi Udaya

ಬೆಳ್ತಂಗಡಿ ತಾಲೂಕು ಜಿಪಿಟಿ ಶಿಕ್ಷಕರ ಸಂಘದ ವತಿಯಿಂದ ‘ಸ್ನೇಹ ಸಂಗಮ’ ಕಾರ್ಯಕ್ರಮ

Suddi Udaya

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya

ರಾಜ್ಯ ಮಟ್ಟದ ಸ್ಪೆಲ್ ಬಿ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಅವಳಿ‌ ಕರುಗಳಿಗೆ ಜನ್ಮ ನೀಡಿದ ಗೋಮಾತೆ

Suddi Udaya
error: Content is protected !!