23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

ಬೆಳ್ತಂಗಡಿ: ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಬಿಎಂಎಸ್ ನ ಸಂಯೋಜಿತ ವೆಹಿಕಲ್ ಯೂನಿಯನ್ ಗಳು ಸಾರಿಗೆ ಮಂತ್ರಿಗಳಾದ ರಾಮಲಿಂಗ ರೆಡ್ಡಿ ಅವರನ್ನು ವಿಧಾನ ಸೌಧದಲ್ಲಿ ಭೇಟಿ ಮಾಡಿ ಆಗ್ರಹಿಸಲಾಗಿತ್ತು. ರಾಜ್ಯದಾದ್ಯಂತ ಚಾಲಕ ಸಂಘಟನೆಗಳು‌ ಕೂಡ ಚಾಲಕರ ಸಮಸ್ಯೆಗಳನ್ನು ಸರ್ಕಾರ ಪರಿಹರಿಸುವಂತೆ ಅಗ್ರಹಿಸಿದ್ದವು.

ಈ ಪ್ರಯುಕ್ತ ಸಾರಿಗೆ ಆಯುಕ್ತರು ಬೆಂಗಳೂರು ಕಚೇರಿಯಲ್ಲಿ ಸಾರಿಗೆ ಒಕ್ಕೂಟದ ಸಂಘಟನೆಗಳ ಸಭೆಯನ್ನು ಕರೆದಿದ್ದು ಬೆಳ್ತಂಗಡಿ ತಾಲೂಕಿನ ರಿಕ್ಷಾ ಚಾಲಕ ಸಂಘದ ಪ್ರತಿನಿಧಿಗಳು ಈ ಸಭೆಯಲ್ಲಿ‌ ಭಾಗವಹಿಸಿದರು.

ಸಭೆಯಲ್ಲಿ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿಯವರು ಹಾಗೂ ಸಾರಿಗೆ ಅಯುಕ್ತರು ಉಪಸ್ಥಿತರಿದ್ದರು. ರಿಕ್ಷಾ ಚಾಲಕರ ಸಮಸ್ಯೆಗಳನ್ನು ಬಗೆಹರಿಸುವಂತೆ ಬಿಎಂಎಸ್ ವೆಹಿಕಲ್ ಯೂನಿಯನ್ ಪ್ರಮುಖರು .ಮುಖ್ಯವಾಗಿ ರಿಕ್ಷಾ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗೆ ಕಲ್ಯಾಣ ಮಂಡಳಿಯನ್ನು ರಚಿಸುವಂತೆ ಹಾಗೂ ಉಚಿತ ಆಸ್ಪತ್ರೆ ಚಿಕಿತ್ಸಾ ವೆಚ್ಚ, ಚಾಲಕರ ಮಕ್ಕಳಿಗೆ ಸ್ಕಾಲರ್ ಶಿಪ್ ,ಗೃಹ ನಿರ್ಮಾಣಕ್ಕೆ ಸಹಾಯಧನವನ್ನು ನೀಡುವಂತೆ, ವ್ರದ್ದಾಪ್ಯ ಪಿಂಚಣಿಯನ್ನು ನೀಡುವಂತೆ ಸಭೆಯಲ್ಲಿ ಅಗ್ರಹಿಸಲಾಯಿತು.

ಬೆಳ್ತಂಗಡಿ ತಾಲೂಕು ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ಕೃಷ್ಣಬೆಳಾಲು, ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಗರ್ಡಾಡಿ ಅವರು ಸಭೆಯಲ್ಲಿ ಭಾಗವಹಿಸಿದ್ದರು.

Related posts

ಅಳದಂಗಡಿಯಲ್ಲಿ ಸಂಭ್ರಮದ ಪಟ್ಟದ ಕಂಬಳ

Suddi Udaya

ಶ್ರೀ.ಧ.ಮಂ. ಕಾಲೇಜಿನಲ್ಲಿ ‘ತೆರಿಗೆಯ ಮೂಲಭೂತ ಅಂಶಗಳು’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ಆರಂಬೋಡಿ: ಪಾಣಿಮೇರುನಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ

Suddi Udaya

ಶಟಲ್ ಬ್ಯಾಡ್ಮಿಟನ್ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!