24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

ಬೆಳ್ತಂಗಡಿ: ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಬಿಎಂಎಸ್ ನ ಸಂಯೋಜಿತ ವೆಹಿಕಲ್ ಯೂನಿಯನ್ ಗಳು ಸಾರಿಗೆ ಮಂತ್ರಿಗಳಾದ ರಾಮಲಿಂಗ ರೆಡ್ಡಿ ಅವರನ್ನು ವಿಧಾನ ಸೌಧದಲ್ಲಿ ಭೇಟಿ ಮಾಡಿ ಆಗ್ರಹಿಸಲಾಗಿತ್ತು. ರಾಜ್ಯದಾದ್ಯಂತ ಚಾಲಕ ಸಂಘಟನೆಗಳು‌ ಕೂಡ ಚಾಲಕರ ಸಮಸ್ಯೆಗಳನ್ನು ಸರ್ಕಾರ ಪರಿಹರಿಸುವಂತೆ ಅಗ್ರಹಿಸಿದ್ದವು.

ಈ ಪ್ರಯುಕ್ತ ಸಾರಿಗೆ ಆಯುಕ್ತರು ಬೆಂಗಳೂರು ಕಚೇರಿಯಲ್ಲಿ ಸಾರಿಗೆ ಒಕ್ಕೂಟದ ಸಂಘಟನೆಗಳ ಸಭೆಯನ್ನು ಕರೆದಿದ್ದು ಬೆಳ್ತಂಗಡಿ ತಾಲೂಕಿನ ರಿಕ್ಷಾ ಚಾಲಕ ಸಂಘದ ಪ್ರತಿನಿಧಿಗಳು ಈ ಸಭೆಯಲ್ಲಿ‌ ಭಾಗವಹಿಸಿದರು.

ಸಭೆಯಲ್ಲಿ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿಯವರು ಹಾಗೂ ಸಾರಿಗೆ ಅಯುಕ್ತರು ಉಪಸ್ಥಿತರಿದ್ದರು. ರಿಕ್ಷಾ ಚಾಲಕರ ಸಮಸ್ಯೆಗಳನ್ನು ಬಗೆಹರಿಸುವಂತೆ ಬಿಎಂಎಸ್ ವೆಹಿಕಲ್ ಯೂನಿಯನ್ ಪ್ರಮುಖರು .ಮುಖ್ಯವಾಗಿ ರಿಕ್ಷಾ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗೆ ಕಲ್ಯಾಣ ಮಂಡಳಿಯನ್ನು ರಚಿಸುವಂತೆ ಹಾಗೂ ಉಚಿತ ಆಸ್ಪತ್ರೆ ಚಿಕಿತ್ಸಾ ವೆಚ್ಚ, ಚಾಲಕರ ಮಕ್ಕಳಿಗೆ ಸ್ಕಾಲರ್ ಶಿಪ್ ,ಗೃಹ ನಿರ್ಮಾಣಕ್ಕೆ ಸಹಾಯಧನವನ್ನು ನೀಡುವಂತೆ, ವ್ರದ್ದಾಪ್ಯ ಪಿಂಚಣಿಯನ್ನು ನೀಡುವಂತೆ ಸಭೆಯಲ್ಲಿ ಅಗ್ರಹಿಸಲಾಯಿತು.

ಬೆಳ್ತಂಗಡಿ ತಾಲೂಕು ರಿಕ್ಷಾ ಚಾಲಕ ಸಂಘದ ಅಧ್ಯಕ್ಷರಾದ ಕೃಷ್ಣಬೆಳಾಲು, ಪ್ರಧಾನ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಗರ್ಡಾಡಿ ಅವರು ಸಭೆಯಲ್ಲಿ ಭಾಗವಹಿಸಿದ್ದರು.

Related posts

ಮಹಾವೀರ ಜಯಂತಿ ರಜೆ ಹಿನ್ನಲೆ ಮಾ.30ರಂದು ನಡೆಯಬೇಕಾಗಿದ್ದ ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

Suddi Udaya

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಅರಸಿನಮಕ್ಕಿ-ಬೂಡುಮುಗೇರು ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಅಳದಂಗಡಿ ವಲಯದ ಬಡಗಕಾರಂದೂರು ಎ ಮತ್ತು ಬಿ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯ 10 ದಿನಗಳವರೆಗೆ ಎಸ್.ಐ.ಟಿ ಕಸ್ಟಡಿಗೆ

Suddi Udaya
error: Content is protected !!