July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಶೌರ್ಯ ವಿಪತ್ತು ನಿರ್ವಹಣಾ ಘಟಕ ಅಳದಂಗಡಿ ವಲಯದಿಂದ ಉಂಬುಜೆ ಕೊರಗಪ್ಪರವರ ಶಿಥಿಲಗೊಂಡ ಮನೆಯ ಛಾವಣಿಯ ತೆರವು ಕಾರ್ಯಾಚರಣೆ


ಅಳದಂಗಡಿ ವಲಯ ವ್ಯಾಪ್ತಿಯ ನಾವರ ಗ್ರಾಮದ ಉಂಬುಜೆ ಎಂಬಲ್ಲಿ ಕೊರಗಪ್ಪ ಮಲೆಕುಡಿಯ ದಂಪತಿಯ ಮನೆಯ ಮೇಲ್ಚಾವಣಿಯು ತೀರ ದುಸ್ಥಿತಿಯಲ್ಲಿದ್ದು. ಯಾವುದೇ ಸಮಯದಲ್ಲಿ ಬಿದ್ದು ಹೋಗುವ ಪರಿಸ್ಥಿತಿಯಲ್ಲಿತ್ತು. ದಂಪತಿಗಳಿಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದು ಸ್ವತಂತ್ರವಾಗಿ ಯಾವುದೇ ಕೆಲಸಗಳನ್ನು ನೆರವೇರಿಸುವಲ್ಲಿ ಅಸಹಾಯಕರಾಗಿದ್ದರು. ದಂಪತಿಗಳಿಬ್ಬರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಪಕ್ಕದ ಮನೆಯವರು ಕಳುಹಿಸಿದ್ದು ಮನೆ ಖಾಲಿ ಆಗಿತ್ತು. ಇದೇ ಸಂದರ್ಭದಲ್ಲಿ ಮನೆಯ ದುರಸ್ತಿ ಕಾರ್ಯ ಮಾಡುವುದು ಒಳಿತೆಂದು ಮನಗಂಡು ವೃದ್ಧರ ಆರೈಕೆಯನ್ನು ಮಾಡುತ್ತಿದ್ದ ಅವರ ಸಹೋದರ ಸಂಬಂಧಿಗಳು. ಮನೆಯ ಛಾವಣಿ ತೆರವುಗೊಳಿಸುವಲ್ಲಿ ವಿಪತ್ತು ನಿರ್ವಹಣಾ ಸ್ವಯಂ ಸೇವಕರ ನೆರವನ್ನು ಕೋರಿ ಮನವಿಯನ್ನು ಸಲ್ಲಿಸಿದ್ದರು.
ವಿಷಯವನ್ನು ವಲಯ ಮೇಲ್ವಿಚಾರಕರು ಹಾಗೂ ಯೋಜನಾಧಿಕಾರಿಗಳ ಗಮನಕ್ಕೆ ತಂದು ಮೇಲ್ಚಾವಣಿಯ ತೆರವು ಕಾರ್ಯವನ್ನು ನಿರ್ವಹಿಸಿದರು.

ಈ ಸಂದರ್ಭದಲ್ಲಿ ಘಟಕ ಪ್ರತಿನಿಧಿ ರಾಜೇಶ್ ಹಾಗೂ ಶ್ರೀಮತಿ ಶಕುಂತಲಾ, ಸ್ವಯಂ ಸೇವಕರಾದ ಪ್ರಕಾಶ್ ಕೊಲ್ಲಂಗೆ, ಶಿವಾನಂದ, ಶ್ರೀಕಾಂತ್, ಸರಸ್ವತಿ, ಹೇಮಾವತಿ, ಅಮಿತಾ ಹಾಗೂ ನಳಿನಿ ಸ್ವಯಂಸೇವಕರು ಭಾಗವಹಿಸಿದರು.

ಸ್ವಯಂ ಸೇವಕರೊಂದಿಗೆ ಈ ಕಾರ್ಯದಲ್ಲಿ ಸೋದರ ಸಂಬಂಧಿಗಳು ಸಹಕರಿಸಿದರು. ಸೇವಾ ಪ್ರತಿನಿಧಿ ಕುಮಾರಿ ಸುಲೋಚನಾರವರು ಸ್ಥಳದಲ್ಲಿ ಉಪಸ್ಥಿತರಿದ್ದರು.

Related posts

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು

Suddi Udaya

ಪದ್ಮುಂಜ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.92 ಫಲಿತಾಂಶ

Suddi Udaya

ಗೇರುಕಟ್ಟೆ : ಪರಪ್ಪು ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಜಿ ಡಿ ಅಶ್ರಫ್ ಆಯ್ಕೆ

Suddi Udaya

ಕಡಿರುದ್ಯಾವರ :ಹೇಡ್ಯ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಪಲ್ಕೆ ಹೊಡಿಕಾರ್ ರಸ್ತೆಯ ಇಂಟರ್ಲಾಕ್ ಕಾಮಗಾರಿ ಕಳಪೆ ಆರೋಪ: ನಾವೂರು ಗ್ರಾ.ಪಂ.ಗೆ ಎಸ್.ಡಿ.ಪಿ.ಐ ಮನವಿ

Suddi Udaya

ಶಾಸಕ ಹರೀಶ್ ಪೂಂಜರವರಿಂದ ಪಡಂಗಡಿ ಸಹಕಾರಿ ಸಂಘದ ಕಾವಲುಗಾರ ಕೊಠಡಿಯ ಉದ್ಘಾಟನೆ

Suddi Udaya
error: Content is protected !!